ನವದೆಹಲಿ: ಪರಸ್ಪರ ಒಪ್ಪಿಗೆಯೊಂದಿಗೆ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ದಿನಾಂಕ ನಿಗದಿಪಡಿಸಲು ಇದುವರೆಗೂ ಉಭಯ ರಾಷ್ಟ್ರಗಳಿಗೆ ಸಾಧ್ಯವಾಗಿಲ್ಲ.
ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಅವರು, 'ಇದುವರೆಗೂ ಎರಡು ದೇಶಗಳಿಗೂ ಅನುಕೂಲಕರವಾದ ದಿನಾಂಕ ಸಿಕ್ಕಿಲ್ಲ' ಎಂದು ಹೇಳಿದ್ದಾರೆ.
ಇನ್ನು ಪಠಾಣ್ಕೋಟ್ ಉಗ್ರ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಉಭಯ ದೇಶಗಳ ಸರ್ಕಾರಗಳು ನಿರಂತರ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸ್ವರೂಪ್ ನಿರಾಕರಿಸಿದರು.
ಇದೇ ವೇಳೆ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಉಗ್ರ ಝಕಿಉರ್ ರೆಹಮಾನ್ ಲಖ್ವಿ ಧ್ವನಿ ಮಾದರಿ ನೀಡಲು ಪಾಕ್ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ವರೂಪ್, ಈ ಬಗ್ಗೆ ಮಾಧ್ಯಮ ವರದಿ ನೋಡಿದ್ದೇನೆ. ಆದರೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos