ವಿಕಾಸ್ ಸ್ವರೂಪ್ 
ದೇಶ

ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ದಿನಾಂಕ ಇನ್ನೂ ನಿಗದಿಯಾಗಿಲ್ಲ

ಪರಸ್ಪರ ಒಪ್ಪಿಗೆಯೊಂದಿಗೆ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ದಿನಾಂಕ ನಿಗದಿಪಡಿಸಲು ಇದುವರೆಗೂ ಉಭಯ...

ನವದೆಹಲಿ: ಪರಸ್ಪರ ಒಪ್ಪಿಗೆಯೊಂದಿಗೆ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ದಿನಾಂಕ ನಿಗದಿಪಡಿಸಲು ಇದುವರೆಗೂ ಉಭಯ ರಾಷ್ಟ್ರಗಳಿಗೆ ಸಾಧ್ಯವಾಗಿಲ್ಲ. 
ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಅವರು,  'ಇದುವರೆಗೂ ಎರಡು ದೇಶಗಳಿಗೂ ಅನುಕೂಲಕರವಾದ ದಿನಾಂಕ ಸಿಕ್ಕಿಲ್ಲ' ಎಂದು ಹೇಳಿದ್ದಾರೆ.
ಇನ್ನು ಪಠಾಣ್‌ಕೋಟ್ ಉಗ್ರ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಉಭಯ ದೇಶಗಳ ಸರ್ಕಾರಗಳು ನಿರಂತರ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸ್ವರೂಪ್ ನಿರಾಕರಿಸಿದರು.
ಇದೇ ವೇಳೆ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಉಗ್ರ ಝಕಿಉರ್ ರೆಹಮಾನ್ ಲಖ್ವಿ ಧ್ವನಿ ಮಾದರಿ ನೀಡಲು ಪಾಕ್ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ವರೂಪ್, ಈ ಬಗ್ಗೆ ಮಾಧ್ಯಮ ವರದಿ ನೋಡಿದ್ದೇನೆ. ಆದರೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT