ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನಿ ಸೂಚನೆ

ಹಲವು ಬಾರಿ ಎಚ್ಚರಿಕೆ ನೀಡಿದರು ಕಾರ್ಯಕ್ಷಮತೆಯನ್ನು ಸುಧಾರಿಸದ ಅಧಿಕಾರಿಗಳನ್ನು ವಜಾಗೊಳಿಸಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ನವದೆಹಲಿ: ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳ ವಿರದ್ಧ ಕಠಿಣ ನಿಲುವು ತಾಳಿರುವ ಪ್ರಧಾನಿ ನರೇಂದ್ರ ಮೋದಿ, ಹಲವು ಬಾರಿ ಎಚ್ಚರಿಕೆ ನೀಡಿದರು ಕಾರ್ಯಕ್ಷಮತೆಯನ್ನು ಸುಧಾರಿಸದ ಅಧಿಕಾರಿಗಳನ್ನು ವಜಾಗೊಳಿಸಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಎಚ್ಚರಿಕೆ ನೀಡಿದ ನಂತರವೂ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳದೇ ಇರುವ ಅಧಿಕಾರಿಗಳನ್ನು ಗುರುತಿಸಿ ಅಂತಹ ಅಧಿಕಾರಿಗಳನ್ನು ವಜಾಗೊಳಿಸುವುದು, ಪಿಂಚಣಿಯನ್ನು  ತಡೆಹಿಡಿಯುವುದು ಸೇರಿದಂತೆ ಅವರ ವಿರುದ್ಧ  ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಶಿಫಾರಸು ಮಾಡಲು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗಿನ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
 
ಹೆಚ್ಚಿನ ಸಾರ್ವಜನಿಕ ಸಂಪರ್ಕ ಹೊಂದಿರುವ ಇಲಾಖೆಗಳು ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಉನ್ನತ ಮಟ್ಟದ ಪರಿವೀಕ್ಷಣಾ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಮೋದಿ ಹೇಳಿದ್ದಾರೆ ಕಾರ್ಯದರ್ಶಿಗಳ ಸಭೆಯಲ್ಲಿ  ಹಲವು ಯೋಜನೆಗಳ ಪ್ರಗತಿ ಪರಿಶೀಲನೆಯೂ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT