ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನಿ ಸೂಚನೆ

ಹಲವು ಬಾರಿ ಎಚ್ಚರಿಕೆ ನೀಡಿದರು ಕಾರ್ಯಕ್ಷಮತೆಯನ್ನು ಸುಧಾರಿಸದ ಅಧಿಕಾರಿಗಳನ್ನು ವಜಾಗೊಳಿಸಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ನವದೆಹಲಿ: ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳ ವಿರದ್ಧ ಕಠಿಣ ನಿಲುವು ತಾಳಿರುವ ಪ್ರಧಾನಿ ನರೇಂದ್ರ ಮೋದಿ, ಹಲವು ಬಾರಿ ಎಚ್ಚರಿಕೆ ನೀಡಿದರು ಕಾರ್ಯಕ್ಷಮತೆಯನ್ನು ಸುಧಾರಿಸದ ಅಧಿಕಾರಿಗಳನ್ನು ವಜಾಗೊಳಿಸಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಎಚ್ಚರಿಕೆ ನೀಡಿದ ನಂತರವೂ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳದೇ ಇರುವ ಅಧಿಕಾರಿಗಳನ್ನು ಗುರುತಿಸಿ ಅಂತಹ ಅಧಿಕಾರಿಗಳನ್ನು ವಜಾಗೊಳಿಸುವುದು, ಪಿಂಚಣಿಯನ್ನು  ತಡೆಹಿಡಿಯುವುದು ಸೇರಿದಂತೆ ಅವರ ವಿರುದ್ಧ  ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಶಿಫಾರಸು ಮಾಡಲು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗಿನ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
 
ಹೆಚ್ಚಿನ ಸಾರ್ವಜನಿಕ ಸಂಪರ್ಕ ಹೊಂದಿರುವ ಇಲಾಖೆಗಳು ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಉನ್ನತ ಮಟ್ಟದ ಪರಿವೀಕ್ಷಣಾ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಮೋದಿ ಹೇಳಿದ್ದಾರೆ ಕಾರ್ಯದರ್ಶಿಗಳ ಸಭೆಯಲ್ಲಿ  ಹಲವು ಯೋಜನೆಗಳ ಪ್ರಗತಿ ಪರಿಶೀಲನೆಯೂ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT