ಸುಬ್ರಮಣ್ಯಯನ್ ಸ್ವಾಮಿ 
ದೇಶ

ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೋರಿದ ಸುಬ್ರಮಣ್ಯಯನ್ ಸ್ವಾಮಿ

ಬಿಜೆಪಿ ನಾಯಕ ಸುಬ್ರಮಣ್ಯಯನ್ ಸ್ವಾಮಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ...

ನವದೆಹಲಿ: ಬಿಜೆಪಿ ನಾಯಕ ಸುಬ್ರಮಣ್ಯಯನ್ ಸ್ವಾಮಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ವಿರುದ್ಧ ಪ್ಯಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 13(1)(ಡಿ) ಅಡಿ ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಸ್ವಾಮಿ ಮನವಿ ಮಾಡಿದ್ದಾರೆ.
ಕೇಜ್ರಿವಾಲ್ ಅವರು ಮೊದಲ ಬಾರಿ ಸಿಎಂ(ಡಿಸೆಂಬರ್ 28, 2013ರಿಂದ ಫೆಬ್ರುವರಿ 14, 2014) ಆದ ಸಂದರ್ಭದಲ್ಲಿ ದೆಹಲಿ ಸಿಎಂ ಹಾಗೂ ವಿತ್ತ ಸಚಿವ ಸಿಸೋಡಿಯಾ ಅವರು ಅಕ್ರಮವಾಗಿ ಎಸ್‌ಕೆಎನ್ ಅಸೋಸಿಯೇಟ್ಸ್ ಲಿ. ಪರವಾಗಿ ಕೆಲಸ ಮಾಡಿದ್ದಾರೆ ಎಂದು ಸ್ವಾಮಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಈ ಕಂಪನಿಯು ವ್ಯಾಟ್ ವಂಚಿಸಿದ ಪಟ್ಟಿಯಲ್ಲಿದ್ದು, ಕೇಜ್ರಿವಾಲ್ ಅವರು ಅಧಿಕಾರ ವಹಿಸಿಕೊಳ್ಳುವ 10 ದಿನಗಳ ಮುನ್ನ ಆದಾಯ ತೆರಿಗೆ ಇಲಾಖೆ ಆಯುಕ್ತರಿಗೆ ಈ ಕಂಪನಿಗೆ ನೋಟಿಸ್ ನೀಡಿದ್ದರು ಎಂದು ಬಿಜೆಪಿ ನಾಯಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT