ಸುಬ್ರಮಣ್ಯಯನ್ ಸ್ವಾಮಿ 
ದೇಶ

ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೋರಿದ ಸುಬ್ರಮಣ್ಯಯನ್ ಸ್ವಾಮಿ

ಬಿಜೆಪಿ ನಾಯಕ ಸುಬ್ರಮಣ್ಯಯನ್ ಸ್ವಾಮಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ...

ನವದೆಹಲಿ: ಬಿಜೆಪಿ ನಾಯಕ ಸುಬ್ರಮಣ್ಯಯನ್ ಸ್ವಾಮಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ವಿರುದ್ಧ ಪ್ಯಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 13(1)(ಡಿ) ಅಡಿ ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಸ್ವಾಮಿ ಮನವಿ ಮಾಡಿದ್ದಾರೆ.
ಕೇಜ್ರಿವಾಲ್ ಅವರು ಮೊದಲ ಬಾರಿ ಸಿಎಂ(ಡಿಸೆಂಬರ್ 28, 2013ರಿಂದ ಫೆಬ್ರುವರಿ 14, 2014) ಆದ ಸಂದರ್ಭದಲ್ಲಿ ದೆಹಲಿ ಸಿಎಂ ಹಾಗೂ ವಿತ್ತ ಸಚಿವ ಸಿಸೋಡಿಯಾ ಅವರು ಅಕ್ರಮವಾಗಿ ಎಸ್‌ಕೆಎನ್ ಅಸೋಸಿಯೇಟ್ಸ್ ಲಿ. ಪರವಾಗಿ ಕೆಲಸ ಮಾಡಿದ್ದಾರೆ ಎಂದು ಸ್ವಾಮಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಈ ಕಂಪನಿಯು ವ್ಯಾಟ್ ವಂಚಿಸಿದ ಪಟ್ಟಿಯಲ್ಲಿದ್ದು, ಕೇಜ್ರಿವಾಲ್ ಅವರು ಅಧಿಕಾರ ವಹಿಸಿಕೊಳ್ಳುವ 10 ದಿನಗಳ ಮುನ್ನ ಆದಾಯ ತೆರಿಗೆ ಇಲಾಖೆ ಆಯುಕ್ತರಿಗೆ ಈ ಕಂಪನಿಗೆ ನೋಟಿಸ್ ನೀಡಿದ್ದರು ಎಂದು ಬಿಜೆಪಿ ನಾಯಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?