ಅಹ್ಬದಾಬಾದ್: ಹಿರಿಯ ಬಾಲಿವುಡ್ ನಟ ಪರೇಶ್ ರಾವಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ರೀರಾಮನಿಗೆ ಹೋಲಿಕೆ ಮಾಡಿದ್ದಾರೆ.
ನಿರ್ಮಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮಚಂದ್ರನಂತೆ ಎಂದು ಹೇಳಿದ್ದಾರೆ.
ರಾಮಾಯಣದಲ್ಲಿ ಶ್ರೀರಾಮನ ಹೆಸರು ಬರೆದ ಕಲ್ಲುಗಳ ಹೇಗೆ ನೀರ ಮೇಲೆ ತೇಲಿತೋ ಅದೇ ರೀತಿ ನರೇಂದ್ರ ಮೋದಿ ಅವರ ಹೆಸರು 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ತಂದುಕೊಟ್ಟಿತು ಎಂದು ಪರೇಶ್ ತಿಳಿಸಿದ್ದಾರೆ.
ಅಸಹಿಷ್ಣುತೆ ಬಗ್ಗೆ ಮಾತನಾಡಿದ ಅವರು, ಬಿಗಿ ಭದ್ರತೆ ಮತ್ತು ಬೆಲೆ ಬಾಳುವ ಕಾರುಗಳಲ್ಲಿ ಹೋರಾಡುವಂತವರೇ ಅಸಹಿಷ್ಣುತೆ ಬಗ್ಗೆ ಮಾತನಾಡುತ್ತಿರುವುದು ಆಶ್ಚರ್ಯ ತಂದಿದೆ ಎಂದಿದ್ದಾರೆ.
ಅದೇ ಸಂದರ್ಭದಲ್ಲಿ, ಸಿನಿಮಾರಂಗದವರು ಲಾಬಿ ಮಾಡಿ ಪ್ರಶಸ್ತಿ ಗಿಟ್ಟಿಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆಯನ್ನೂ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos