ಉಮನ್ ಚಾಂಡಿ - ಸರಿತಾ 
ದೇಶ

ಕೇರಳ ಸಿಎಂ ಜೊತೆ 'ಅಕ್ರಮ ಸಂಬಂಧ' ನಿರಾಕರಿಸಿದ ಸೋಲಾರ ಹಗರಣದ ಆರೋಪಿ ಸರಿತಾ

ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧದ ಆರೋಪಗಳನ್ನು ಮುಂದುವರೆಸಿರುವ ಸೋಲಾರ ಹಗರಣದ ಪ್ರಮುಖ ಆರೋಪಿ ಹಾಗೂ ಸೌರ...

ಕೊಚ್ಚಿ: ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧದ ಆರೋಪಗಳನ್ನು ಮುಂದುವರೆಸಿರುವ ಸೋಲಾರ ಹಗರಣದ ಪ್ರಮುಖ ಆರೋಪಿ ಹಾಗೂ ಸೌರ ಕಂಪನಿಯೊಂದರ ಮುಖ್ಯಸ್ಥೆ ಸರಿತಾ ಎಸ್. ನಾಯರ್ ಅವರು, ಚಾಂಡಿ ಅವರೇ ತಮ್ಮ ಕುಟುಂಬ ಒಳಗೊಂಡ ಕಂಪನಿ ಸ್ಥಾಪಿಸುವಂತೆ ಒತ್ತಡ ಹೇರಿದ್ದರು ಎಂದು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಶಿವರಾಜನ್ ಆಯೋಗದ ಮುಂದೆ ಇಂದು ವಿಚಾರಣೆ ಹಾಜರಾದ ಸರಿತಾ, ನವೀಕರಿಸಬಹುದಾದ ಇಂಧನ ವ್ಯವಹಾರ ನಡೆಸಲು ಸಿಎಂ ಕಂಪನಿ ಸ್ಥಾಪಿಸುವ ಬಗ್ಗೆ ಸಿಎಂ ಚಾಂಡಿಯೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ.
ಚಾಂಡಿ ಉಮನ್ ಮತ್ತು ಅವರ ಕುಟುಂಬ ಇತರೆ ಸದಸ್ಯರನ್ನೊಳಗೊಂಡ ಕೇರಳ ನವೀಕರಿಸಬಹುದಾದ ಇಂಧನ ಸಹಕಾರ ಸಂಸ್ಥೆ ನಿಗಮ ಸ್ಥಾಪಿಸುವಂತೆ ನನಗೆ ಸೂಚಿಸಿದ್ದರು ಎಂದು ಸರಿತಾ ವಿಚಾರಣಾ ಆಯೋಗಕ್ಕೆ ತಿಳಿಸಿದ್ದಾರೆ.
ಉಮನ್ ಚಾಂಡಿ ಹಾಗೂ ಅವರ ಆಪ್ತರ ವಿರುದ್ಧ ಸತತವಾಗಿ ಕೋಟ್ಯಾಂತರ ರುಪಾಯಿ ಲಂಚಾರೋಪ ಮಾಡುತ್ತಾ ಬಂದಿದ್ದ ಸರಿತಾ, ನಿನ್ನೆ ಇದೀಗ ಹೊಸ ಆರೋಪ ಮಾಡಿದ್ದಾರೆ.
ಇದೇ ವೇಳೆ ತಾವು ಸಿಎಂ ಚಾಂಡಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ತಳ್ಳಿಹಾಕಿರುವ ಸರಿತಾ, ಅವರ ಮಗನೊಂದಿಗೆ ವ್ಯವಹಾರಿಕ ಸಂಬಂಧ ಇತ್ತು ಎಂದು ಹೇಳಿದ್ದಾರೆ.
'ನನಗೆ ಸರಿತಾಳ ಪರಿಚಯವೇ ಇಲ್ಲ, ಮುಖ್ಯಮಂತ್ರಿಯಾಗಿ ಯಾವುದಾದರೂ ಕಾರ್ಯಕ್ರಮದಲ್ಲಿ ಅವಳನ್ನು ಭೇಟಿಯಾಗಿರುವ ಸಾಧ್ಯತೆಯಿದೆ' ಎಂದಿರುವ ಚಾಂಡಿ ಅವರ ಹೇಳಿಕೆಗೆ ಸರಿತಾ, ಆಯೋಗದ ಎದುರು ನೀಡಿದ ಹೇಳಿಕೆ ವ್ಯತಿರಿಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT