(ಸಂಗ್ರಹ ಚಿತ್ರ) 
ದೇಶ

ದೆಹಲಿ ಶಾಲೆಯಲ್ಲಿ ಮಗು ಸಾವು: ತನಿಖೆಗೊಳಪಡುವಂತೆ ಶಿಕ್ಷಕರಿಗೆ ಸೂಚನೆ

ದಕ್ಷಿಣ ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯೊಂದರಲ್ಲಿ ಸಾವನ್ನಪ್ಪಿದ್ದ ಮಗುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಾಲೆಗೆ ನೋಟಿಸ್ ಒಂದನ್ನು ಭಾನುವಾರ ಜಾರಿ ಮಾಡಿದೆ...

ನವದೆಹಲಿ: ದಕ್ಷಿಣ ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯೊಂದರಲ್ಲಿ ಸಾವನ್ನಪ್ಪಿದ್ದ ಮಗುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು  ಶಾಲೆಗೆ ನೋಟಿಸ್ ಒಂದನ್ನು ಭಾನುವಾರ ಜಾರಿ ಮಾಡಿದೆ.

ದೆಹಲಿಯ ರ್ಯಾನ್ ಅಂತರಾಷ್ಟ್ರೀಯ ಶಾಲೆಯೊಂದರ ನೀರಿನ ಟ್ಯಾಂಕ್ ಒಂದರಲ್ಲಿ ನಿನ್ನೆ 6 ವರ್ಷ ಮಗುವಿನ ಮೃತ ದೇಹ ದೊರಕಿತ್ತು. ಘಟನೆ ವಿರೋಧಿ ಹಲವು ಪ್ರತಿಭಟನೆ ನಡೆದಿದ್ದವು. ಅಲ್ಲದೆ, ಶಾಲೆಯ ಪರವಾನಗಿಯನ್ನು ರದ್ದು ಮಾಡುವಂತೆ ಆಗ್ರಹಗಳು ಕೇಳಿಬಂದಿದ್ದವು.

ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಶಾಲೆಯಲ್ಲಿರುವ ಸಿಸಿಟಿವಿಯನ್ನು ಪರಿಶೀಲನೆಗೊಳಪಡಿಸಿದ್ದರು. ಈ ವೇಳೆ ದೃಶ್ಯಾವಳಿಯಲ್ಲಿ ಕೆಲವು ಲೋಪದೋಷಗಳಿರುವುದನ್ನು ಗಮನಿಸಿದ್ದರು. ಹೀಗಾಗಿ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಇದೀಗ ಶಾಲೆಯ ಪ್ರಾಂಶುಪಾಲರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿದ್ದು, ತನಿಖೆಗೊಳಪಡುವಂತೆ ಶಾಲೆಯ ಎಲ್ಲಾ ಶಿಕ್ಷಕರಿಗೂ ಸೂಚನೆ ನೀಡಿದ್ದಾರೆ.

ಪ್ರಸ್ತುತ ಪ್ರಕರಣ ಸಂಬಂಧ ಅನಾಮಧೇಯ ವ್ಯಕ್ತಿಯ ವಿರುದ್ಧ ಸೆಕ್ಷನ್ 304(ಎ)ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪ್ರೇಮ್ ನಾಥ್ ಅವರು, ತನಿಖೆ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಯಾವುದೇ ರೀತಿಯ ಕಾನೂನು ಕ್ರಮಕೈಗೊಳ್ಳಲು ನಾವು ಸಿದ್ಧರಿದ್ದೇವೆ. ಪ್ರಸ್ತುತ ಬಾಲಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT