(ಸಂಗ್ರಹ ಚಿತ್ರ) 
ದೇಶ

ದೆಹಲಿ ಶಾಲೆಯಲ್ಲಿ ಮಗು ಸಾವು: ತನಿಖೆಗೊಳಪಡುವಂತೆ ಶಿಕ್ಷಕರಿಗೆ ಸೂಚನೆ

ದಕ್ಷಿಣ ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯೊಂದರಲ್ಲಿ ಸಾವನ್ನಪ್ಪಿದ್ದ ಮಗುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಾಲೆಗೆ ನೋಟಿಸ್ ಒಂದನ್ನು ಭಾನುವಾರ ಜಾರಿ ಮಾಡಿದೆ...

ನವದೆಹಲಿ: ದಕ್ಷಿಣ ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯೊಂದರಲ್ಲಿ ಸಾವನ್ನಪ್ಪಿದ್ದ ಮಗುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು  ಶಾಲೆಗೆ ನೋಟಿಸ್ ಒಂದನ್ನು ಭಾನುವಾರ ಜಾರಿ ಮಾಡಿದೆ.

ದೆಹಲಿಯ ರ್ಯಾನ್ ಅಂತರಾಷ್ಟ್ರೀಯ ಶಾಲೆಯೊಂದರ ನೀರಿನ ಟ್ಯಾಂಕ್ ಒಂದರಲ್ಲಿ ನಿನ್ನೆ 6 ವರ್ಷ ಮಗುವಿನ ಮೃತ ದೇಹ ದೊರಕಿತ್ತು. ಘಟನೆ ವಿರೋಧಿ ಹಲವು ಪ್ರತಿಭಟನೆ ನಡೆದಿದ್ದವು. ಅಲ್ಲದೆ, ಶಾಲೆಯ ಪರವಾನಗಿಯನ್ನು ರದ್ದು ಮಾಡುವಂತೆ ಆಗ್ರಹಗಳು ಕೇಳಿಬಂದಿದ್ದವು.

ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಶಾಲೆಯಲ್ಲಿರುವ ಸಿಸಿಟಿವಿಯನ್ನು ಪರಿಶೀಲನೆಗೊಳಪಡಿಸಿದ್ದರು. ಈ ವೇಳೆ ದೃಶ್ಯಾವಳಿಯಲ್ಲಿ ಕೆಲವು ಲೋಪದೋಷಗಳಿರುವುದನ್ನು ಗಮನಿಸಿದ್ದರು. ಹೀಗಾಗಿ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಇದೀಗ ಶಾಲೆಯ ಪ್ರಾಂಶುಪಾಲರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿದ್ದು, ತನಿಖೆಗೊಳಪಡುವಂತೆ ಶಾಲೆಯ ಎಲ್ಲಾ ಶಿಕ್ಷಕರಿಗೂ ಸೂಚನೆ ನೀಡಿದ್ದಾರೆ.

ಪ್ರಸ್ತುತ ಪ್ರಕರಣ ಸಂಬಂಧ ಅನಾಮಧೇಯ ವ್ಯಕ್ತಿಯ ವಿರುದ್ಧ ಸೆಕ್ಷನ್ 304(ಎ)ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪ್ರೇಮ್ ನಾಥ್ ಅವರು, ತನಿಖೆ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಯಾವುದೇ ರೀತಿಯ ಕಾನೂನು ಕ್ರಮಕೈಗೊಳ್ಳಲು ನಾವು ಸಿದ್ಧರಿದ್ದೇವೆ. ಪ್ರಸ್ತುತ ಬಾಲಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT