ಸಚಿವ ಪಲ್ಲೆ ರಘುನಾಥ ರೆಡ್ಡಿ (ಸಂಗ್ರಹ ಚಿತ್ರ) 
ದೇಶ

ಕಾಪು ಮೀಸಲಾತಿಗೆ ಸರ್ಕಾರ ಬದ್ಧ: ಸಚಿವ ಪಲ್ಲೆ ರಘುನಾಥ ರೆಡ್ಡಿ

ಕಾಪು ಜನಾಂಗದ ಬೇಡಿಕೆಗಳನ್ನು ಈಡೇರಿಸಲು ಆಂಧ್ರ ಪ್ರದೇಶ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪಲ್ಲೆ ರಘುನಾಥ ರೆಡ್ಡಿ ಭಾನುವಾರ ಹೇಳಿದ್ದಾರೆ...

ಹೈದರಾಬಾದ್: ಕಾಪು ಜನಾಂಗದ ಬೇಡಿಕೆಗಳನ್ನು ಈಡೇರಿಸಲು ಆಂಧ್ರ ಪ್ರದೇಶ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪಲ್ಲೆ ರಘುನಾಥ ರೆಡ್ಡಿ ಭಾನುವಾರ ಹೇಳಿದ್ದಾರೆ.

ಕಾಪು ಜನಾಂಗವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಕಳೆದ ಹಲವು ದಿನಗಳಿಂದ ನಡೆಸುತ್ತಿರುವ "ಕಾಪು ಘರ್ಜನ" ಪ್ರತಿಭಟನಾ ರ್ಯಾಲಿ ಇಂದು ಹಿಂಸಾಚಾರಕ್ಕೆ  ತಿರುಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಆಂಧ್ರ ಪ್ರದೇಶ ಸರ್ಕಾರ ಜನಾಂಗದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದೆ ಎಂದು ಹೇಳಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ  ಮಾತನಾಡಿದ ಆಂಧ್ರ ಪ್ರದೇಶ ಸಚಿವ ಪಲ್ಲೆ ರಘುನಾಥ ರೆಡ್ಡಿ ಅವರು, ಮೀಸಲಾತಿಗೆ ಆಗ್ರಹಿಸಿ ಕಾಪು ಜನಾಂಗ ಹಿಂಸಾಚಾರಕ್ಕೆ ಇಳಿಯುವ ಅವಶ್ಯಕತೆ ಇಲ್ಲ. ನಿಜಕ್ಕೂ ಆಂಧ್ರ ಪ್ರದೇಶ ಸರ್ಕಾರ  ಈ ಬಗ್ಗೆ ಚಿಂತನೆ ನಡೆಸುತ್ತಿದೆ. ಕಾಪು ಜನಾಂಗದ ಅಭಿವೃದ್ದಿಗಾಗಿ 100 ಕೋಟಿ ರು. ವೆಚ್ಚದಲ್ಲಿ ಕಾರ್ಪೋರೇಷನ್ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಲ್ಲದೆ ಕಾಪು ಜನಾಂಗದ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ಸಮಿತಿಯೊಂದನ್ನು ರಚನೆ ಮಾಡಲಾಗುತ್ತಿದ್ದು, ಸರ್ಕಾರ ಕಾಪು ಜನಾಂಗದ ವಿರೋಧಿ ಎಂಬ  ಆರೋಪಗಳಲ್ಲಿ ಹುರುಳಿಲ್ಲ ಎಂದು ಹೇಳಿದರು. ಇದೇ ವೇಳೆ ಪ್ರತಿಪಕ್ಷ ವೈಎಸ್ ಆರ್ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, ಕಾಪುಘರ್ಜನ ಪ್ರತಿಭಟನೆಯನ್ನು ವೈಎಸ್ ಸಿ ಪಿ  ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಪ್ರತಿಭಟನಾಕಾರರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುತ್ತಿದೆ. ಕೆಲ ಸಮಾಜ ವಿದ್ರೋಹಿ ವ್ಯಕ್ತಿಗಳು ಪರಿಸ್ಥಿತಿಯ ಲಾಭ ಪಡೆದು ವಿಧ್ವಂಸಕ ಕೃತ್ಯಎಸಗಲು  ಸಂಚು ನಡೆಸುತ್ತಿದ್ದಾರೆ ಎಂದು ಸಚಿವ ರಘುನಾಥ ರೆಡ್ಡಿ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT