ನರೇಂದ್ರ ಮೋದಿ 
ದೇಶ

ಖಾದಿ ದೇಶದ ಲಾಂಛನ: ಮನ್ ಕಿ ಬಾತ್ ನಲ್ಲಿ ಮೋದಿ

ದೇಶದ ಯುವ ಜನತೆಯ ಗುರುತಿನಂತಾಗಿರುವ ಖಾದಿ ಉದ್ಯಮ ಕೋಟ್ಯಾಂತರ ಜನರ ಬದುಕಿಗೆ ಆಧಾರವಾಗಿದ್ದು ಇನ್ನಷ್ಟು ಬೆಳೆಯಬೇಕಾಗಿದೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2016ನೇ ವರ್ಷದ ಮೊದಲ ‘ಮನ್ ಕಿ ಬಾತ್’ ನಲ್ಲಿ ದೇಶವಾಸಿಗಳ ಮುಂದೆ ತಮ್ಮ ಮನದ ಮಾತುಗಳನ್ನು ಬಿಚ್ಚಿಟ್ಟರು.

ದೇಶಕ್ಕಾಗಿ ಪ್ರಾಣ ತೆತ್ತ ವೀರ ಯೋಧರಿಗೆ ನನ್ನ ನಮನಗಳು ಎಂದು ಹೇಳುವ ಮೂಲಕ ಮನ್ ಕಿ ಬಾತ್ ಆರಂಭಿಸಿದ ಅವರು, ಎಲ್ಲರೂ 2 ನಿಮಿಷ ಮೌನಾಚರಣೆ ಮಾಡುವ ಮೂಲಕ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಸಲು ಕೋರಿದರು.

ಪ್ರತಿವರ್ಷ ಜನವರಿ 30 ರಂದು  ಮಹಾತ್ಮಗಾಂಧೀಜಿ ಅವರು ಹುತಾತ್ಮರಾದ ದಿನ  ವನ್ನು ಹುತಾತ್ಮರ ದಿನವನ್ನಾಗಿ  ಆಚರಿಸುತ್ತಿದ್ದೇವೆ. ಭಾರತದ ಸಮಗ್ರ ಉನ್ನತಿಯ ಕನಸನ್ನು ಗಾಂಧೀಜಿ ಅವರು ಕಂಡಿದ್ದರು. ಅವರ ಮಹದಾಸೆಯಾಗಿದ್ದ ಖಾದಿ ಬಳಕೆ ಇನ್ನಷ್ಟು ಉತ್ತೇಜನ ನೀಡಬೇಕಾಗಿದೆ. ದೇಶದ ಯುವ ಜನತೆಯ ಗುರುತಿನಂತಾಗಿರುವ ಖಾದಿ ಉದ್ಯಮ ಕೋಟ್ಯಾಂತರ ಜನರ ಬದುಕಿಗೆ ಆಧಾರವಾಗಿದ್ದು ಇನ್ನಷ್ಟು ಬೆಳೆಯಬೇಕಾಗಿದೆ.

ಚರಕ ತಮ್ಮ ಬದುಕಿನಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ ಎಂಬುದಾಗಿ ಬಹಳಷ್ಟು ಮಂದಿ ನನಗೆ ಬರೆದಿದ್ದಾರೆ ಎಂದು ಹೇಳಿದ ಮೋದಿ, ಭಾರತದ ಸ್ವಾತಂತ್ರ್ಯ ‘ಖಾದಿ’ಯಲ್ಲಿ ಇದೆ, ಭಾರತದ ನಾಗರಿಕತೆ ಖಾದಿಯನ್ನು ಪ್ರತಿನಿಧಿಸುತ್ತದೆ ಎಂದು ಸರ್ದಾರ್ ವಲ್ಲಭ ಭಾಯಿ ಪಟೇಲ್ ಹೇಳಿದ್ದರು ಎಂದು ಸ್ಮರಿಸಿದರು.

ತೊಂದರೆಯಲ್ಲಿ ಸಿಲುಕಿದ ರೈತರಿಗೆ ಪರಿಹಾರ ಒದಗಿಸುವ ಏಕೈಕ ಮಾರ್ಗ ಬೆಳೆ ವಿಮಾ ಯೋಜನೆ. ಆದಷ್ಟು ಹೆಚ್ಚು ರೈತರನ್ನು ಬೆಳೆ ವಿಮಾ ಯೋಜನೆಯ ವ್ಯಾಪ್ತಿಗೆ ತರೋಣ. ನಮ್ಮ ರೈತರ ಹೆಸರಿನಲ್ಲಿ ಬಹಳಷ್ಟು ವಿಷಯಗಳನ್ನು ಹೇಳಲಾಗುತ್ತದೆ. ಆದರೆ ನಾನು ಈ ವಿವಾದದಲ್ಲಿ ಭಾಗಿಯಾಗಲು ಇಷ್ಟ ಪಡುವುದಿಲ್ಲ ಎಂದು ಮೋದಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT