ತುನಿಯಲ್ಲಿ ರತ್ನಾಂಚಲ ಎಕ್ಸ್ ಪ್ರೆಸ್ ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು 
ದೇಶ

ಹಿಂಸಾಚಾರಕ್ಕೆ ತಿರುಗಿದ "ಕಾಪು ಘರ್ಜನ": ತುನಿಯಲ್ಲಿ ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ

ಕಾಪು ಜನಾಂಗಕ್ಕೆ ಮೀಸಲಾತಿ ನೀಡುವಂತೆ ಆಂಧ್ರ ಪ್ರದೇಶದಲ್ಲಿ ನಡೆಯುತ್ತಿರುವ "ಕಾಪು ಘರ್ಜನ" ಪ್ರತಿಭಟನೆ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ತುನಿಯಲ್ಲಿ ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ...

ಅಮರಾವತಿ: ಕಾಪು ಜನಾಂಗಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಆಂಧ್ರ ಪ್ರದೇಶದಲ್ಲಿ ನಡೆಯುತ್ತಿರುವ "ಕಾಪು ಘರ್ಜನ" ಪ್ರತಿಭಟನೆ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ತುನಿಯಲ್ಲಿ ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಗೋದಾವರಿ ಜಿಲ್ಲೆಯ ತುನಿ ರೈಲ್ವೇ ನಿಲ್ದಾಣದಲ್ಲಿ ಇಂದು ನಡೆದ ಪ್ರತಿಭಟನಾ ರ್ಯಾಲಿ ಇದ್ದಕ್ಕಿದ್ದಂತೆಯೇ ಹಿಂಸಾಚಾರಕ್ಕೆ ತಿರುಗಿದ್ದು, ನಿಲ್ದಾಣದಲ್ಲಿದ್ದ ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲೆತ್ನಿಸಿದ ಹತ್ತಾರು ಪೊಲೀಸರಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಇನ್ನು ನಾಲ್ಕು ಪೊಲೀಸ್ ವಾಹನಗಳಿಗೂ ಕೂಡ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಘಟನೆಯನ್ನು ವರದಿ ಮಾಡಲು ಬಂದ ಮಾಧ್ಯಮದವರ ಮೇಲೂ ಕೂಡ ದಾಳಿಗಳಾಗಿದ್ದು, ಖಾಸಗಿ ಸುದ್ದಿವಾಹಿನಿಗಳ ವ್ಯಾನ್ ಗಳನ್ನು ಧ್ವಂಸಮಾಡಲಾಗಿದೆ. ಅಲ್ಲದೆ ವರದಿಗಾರರ ಕ್ಯಾಮೆರಾಗಗಳನ್ನು ಕಸಿದುಕೊಂಡು ಅವುಗಳನ್ನು ಜಖಂಗೊಳಿಸಿ, ವರದಿಗೆ ತೆರಳಿದ ಪತ್ರಕರ್ತರ ಮೇಲೆ ತೀವ್ರ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದಲ್ಲದೇ ಸ್ಥಳೀಯ ಪೊಲೀಸ್ ಠಾಣೆಯ ಮೇಲೂ ದಾಳಿ ಮಾಡಿರುವ ಪ್ರತಿಭಟನಾಕಾರರು ಇಡೀ ಠಾಣೆಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ರೈಲು ಸಂಚಾರ ದಿಢೀರ್ ಬಂದ್
ಇನ್ನು ತುನಿಯಲ್ಲಿ ಹಿಂಸಾಚಾರ ನಡೆಯುತ್ತಿರುವುದರಿಂದ ವಿಶಾಖಪಟ್ಟಣಂ ರೈಲ್ವೇ ನಿಲ್ದಾಣದಿಂದ ಹೊರಡಬೇಕಿದ್ದ ಎಲ್ಲ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ತುನಿಯ ಸುತ್ತಮುತ್ತಲ ಸುಮಾರು 20 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದು, ಹೆದ್ದಾರಿಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ತುರ್ತು ಪ್ರಹಾರ ದಳ, ಜಲಫಿರಂಗಿ, ಅಶ್ರುವಾಯುದಳಗಳು ಸೇರಿದಂತೆ ನೂರಾರು ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸ ಪಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT