ದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ (ಸಂಗ್ರಹ ಚಿತ್ರ) 
ದೇಶ

ಆತ್ಮಹತ್ಯೆ ಮಾಡಿಕೊಂಡ ರೋಹಿತ್ ವೆಮುಲ ದಲಿತನಲ್ಲ: ಸುಷ್ಮಾ ಸ್ವರಾಜ್

ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ದಲಿತನೇ ಆಗಿರಲಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾನುವಾರ ಹೇಳಿದ್ದಾರೆ...

ಹೈದರಾಬಾದ್: ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ದಲಿತನೇ ಆಗಿರಲಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾನುವಾರ ಹೇಳಿದ್ದಾರೆ.

ದಲಿತ ವಿದ್ಯಾರ್ಥಿ ಸಾವು ಕುರಿತಂತೆ ಮಹಾರಾಷ್ಟ್ರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಸಂಬಂಧ ನನಗೆ ಗೊತ್ತಿರುವ ಹಾಗೂ ಬಂದಿರುವ ಮಾಹಿತಿಯ ಪ್ರಕಾರ ರೋಹಿಲ್ ದಲಿತ ಸಮುದಾಯಕ್ಕೆ ಸೇರಿದವನಲ್ಲ. ಅವನು ದಲಿತ ಸಮುದಾಯಕ್ಕೆ ಸೇರಿದವನೆಂದು ಹೇಳಲಾಗುತ್ತಿದೆಯಷ್ಟೇ. ಕೆಲವು ವ್ಯಕ್ತಿಗಳು ಪ್ರಕರಣವನ್ನು ಸುಖಾಸುಮ್ಮನೆ ಸಮುದಾಯ ಗಲಭೆಯಾಗಿ ಮಾರ್ಪಾಡು ಮಾಡುವ ಯತ್ನ ನಡೆಸುತ್ತಿದ್ದಾರೆ. ಘಟನೆಯನ್ನು ಜಾತಿ ಗಲಭೆಯಾಗಿ ಮಾರ್ಪಾಡು ಮಾಡುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ನಡೆದ ಘರ್ಷಣೆಯೊಂದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ರೋಹಿತ್ ಸೇರಿದಂತೆ ಮತ್ತೈವರು ವಿದ್ಯಾರ್ಥಿಗಳನ್ನು 2015ರ ಆಗಸ್ಟ್ ತಿಂಗಳಿನಲ್ಲಿ ವಿವಿಯಿಂದ ಅಮಾನತು ಮಾಡಿದ್ದರು. ಇದರಿಂದ ನೊಂದಿದ್ದ ರೋಹಿತ್ ಆತ್ಮಹತ್ಯೆಗೆ ಶರಣಾಗಿದ್ದ. ಈ ಪ್ರಕರಣವೀಗ ರಾಜಕೀಯ ವಲಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT