ಬಾಬಾ ರಾಮ್ ದೇವ್ 
ದೇಶ

ಬಂಜೆತನ ನಿವಾರಣೆಗೆ ಔಷಧ: ಬಾಬಾ ರಾಮ್ ದೇವ್ ವಿರುದ್ಧ ತನಿಖಾ ವರದಿ

ಯೋಗ ಗುರು ರಾಮ್‌ದೇವ್ ಆಯುರ್ವೇದ ಉತ್ಪನ್ನವಾಗಿರುವ ಬಂಜೆತನ ನಿವಾರಣೆ ಔಷಧಕ್ಕೆ ಸಂಬಂಧಿಸಿದ ತನಿಖಾ ಸಮಿತಿಯು ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ್ದು,...

ಡೆಹರಾಡೂನ್; ಯೋಗ ಗುರು ರಾಮ್‌ದೇವ್ ಆಯುರ್ವೇದ ಉತ್ಪನ್ನವಾಗಿರುವ ಬಂಜೆತನ ನಿವಾರಣೆ ಔಷಧಕ್ಕೆ ಸಂಬಂಧಿಸಿದ ತನಿಖಾ ಸಮಿತಿಯು ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಅದು ವರದಿ ರಾಮ್ ದೇವ್ ಅವರಿಗೆ ವಿರುದ್ಧವಾಗಿದೆ ಎಂದು ಹೇಳಲಾಗಿದೆ.

ಪುತ್ರ ಸಂತಾನದ ಭರವಸೆಯನ್ನು ನೀಡುವ ಬಂಜೆತನ ನಿವಾರಣೆ ಔಷಧ 'ಪುತ್ರಜೀವಕ್ ಬೀಜ್'ಗೆ ಸಂಬಂಧಿಸಿದಂತೆ ವ್ಯಾಪಕ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಉತ್ತರಾಖಂಡ್ ಸರಕಾರವು ಕಳೆದ ವರ್ಷ ಮೂವರು ಸದಸ್ಯರ ಸಮಿತಿ ರಚಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು.

ಸಮಿತಿಯು ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ವರದಿ ಸಲ್ಲಿಸಿದ್ದು, ಅದು ರಾಮ್‌ದೇವ್ ಅವರ ಪರವಾಗಿ ಇಲ್ಲ. ಸಿಎಂ ಸಮ್ಮತಿಸಿದ ಬಳಿಕ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಆರೋಗ್ಯ ಇಲಾಖೆಯ ಮುಖ್ಯ ಕಾರ‌್ಯದರ್ಶಿ ಓಂ ಪ್ರಕಾಶ್ ಹೇಳಿದರು.

ಈ ಔಷಧವನ್ನು ನಿಷೇಧಿಸಬೇಕು ಮತ್ತು ಉತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಳೆದ ಮೇ ತಿಂಗಳಲ್ಲಿ ಜೆಡಿಯು ಸಂಸದ ಕೆ.ಸಿ.ತ್ಯಾಗಿ ಆಗ್ರಹಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಮಿತಿ ರಚಿಸುವಂತೆ ಕೇಂದ್ರವು ರಾಜ್ಯ ಸರಕಾರಕ್ಕೆ ನಿರ್ದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT