ಸುಪ್ರೀಂಕೋರ್ಟ್ 
ದೇಶ

ಗುಜರಾತ್ ಭಾರತ ದೇಶದ ಭಾಗವಲ್ಲವೇ? ಸುಪ್ರಿಂ ತಪರಾಕಿ

ಸಂಸತ್ತಿನಲ್ಲಿ ಅಂಗೀಕಾರಗೊಂಡ ಕಾಯ್ದೆಗಳನ್ನು ಗುಜರಾತ್‌ನಂಥ ರಾಜ್ಯಗಳು ಏಕೆ ಜಾರಿಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ....

ನವದೆಹಲಿ: ಸಂಸತ್ತಿನಲ್ಲಿ ಅಂಗೀಕಾರಗೊಂಡ ಕಾಯ್ದೆಗಳನ್ನು ಗುಜರಾತ್‌ನಂಥ ರಾಜ್ಯಗಳು ಏಕೆ ಜಾರಿಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಆಹಾರ ಭದ್ರತಾ ಕಾಯ್ದೆ ಯೋಜನೆಯನ್ನು ಜಾರಿಗೊಳಿಸದ ರಾಜ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್ 'ಸಂಸತ್ತು ಏನು ಮಾಡುತ್ತಿದೆ? ಗುಜರಾತ್ ದೇಶದ ಭಾಗವಲ್ಲವೇ? ಕಾಯ್ದೆ ಸಂಪೂರ್ಣ ರಾಷ್ಟ್ರಕ್ಕೆ ಅನ್ವಯಗೊಂಡರೂ, ಗುಜರಾತಿನಲ್ಲೇಕೆ ಜಾರಿಯಾಗುತ್ತಿಲ್ಲ. ಹೀಗಾದರೆ ನಾಳೆ ಸಿಆರ್‌ಪಿಸಿ, ಐಪಿಸಿ ಮತ್ತು ಎವಿಡೆನ್ಸ್ ಆ್ಯಕ್ಟ್‌ಗಳೂ ಜಾರಿಗೊಳಿಸಲು ಆಗುವುದಿಲ್ಲವೆಂದು ಹೇಳಬಹುದು ಎಂದು ಕಿಡಿಕಾರಿದೆ.

ಸಂಸತ್ತಿನಲ್ಲಿ ಅಂಗೀಕಾರವಾದ ಕಾನೂನನ್ನು ಅನುಸರಿಸುವುದಿಲ್ಲವೆಂದು ರಾಜ್ಯವೊಂದು ಹೇಳಲು ಹೇಗೆ ಸಾಧ್ಯ? 'ಗುಜರಾತ್ ರಾಷ್ಟ್ರದಿಂದ ಬೇರ್ಪಡಲು ಇಚ್ಛಿಸುತ್ತಿದೆಯೇ? ಎಂದು ಪ್ರಶ್ನಿಸಿದೆ.

ಕ್ಷೇಮಾಭಿವೃದ್ಧಿ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ, ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಬಿಸಿಯೂಟ ಯೋಜನೆಗಳು ಬರ ಪೀಡಿತ ರಾಜ್ಯಗಳಲ್ಲಿ ಜಾರಿಗೊಂಡ ಬಗ್ಗೆ ಮಾಹಿತಿಯನ್ನು ಫೆ.10ರೊಳಗೆ ನೀಡಲು ಕೇಂದ್ರ ಸರಕಾರಕ್ಕೆ ಪೀಠ ಸೂಚಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

'ಕರ್ಮ ರಿಟರ್ನ್ಸ್': 'The Kerala Files' ವಿರೋಧಿಸಿದ್ದ CPM ನಾಯಕನಿಗೂ ತಟ್ಟಿದ love Jihad ಬಿಸಿ, ಪುತ್ರಿಯ video ವೈರಲ್!

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

SCROLL FOR NEXT