ಅಪಘಾತ ಮಾಡಿದ BMW ಕಾರು (ಸಂಗ್ರಹ ಚಿತ್ರ) 
ದೇಶ

ಶಾಸಕ ಪುತ್ರನ ನಿರ್ಲಕ್ಷ್ಯ ಚಾಲನೆಗೆ ಮೂವರು ಬಲಿ!

ರಾಜಸ್ತಾನದ ಶಾಸಕನ ಪುತ್ರನೋರ್ವ ಯದ್ವಾತದ್ವಾ ಕಾರು ಚಲಾಯಿಸಿದ ಪರಿಣಾಮ ಕಾರು ಆಟೋಗೆ ಢಿಕ್ಕಿ ಹೊಡೆದಿದ್ದು, ಮೂರು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಜೈಪುರದಲ್ಲಿ ನಡೆದಿದೆ...

ಜೈಪುರ: ರಾಜಸ್ತಾನದ ಶಾಸಕನ ಪುತ್ರನೋರ್ವ ಯದ್ವಾತದ್ವಾ ಕಾರು ಚಲಾಯಿಸಿದ ಪರಿಣಾಮ ಕಾರು ಆಟೋಗೆ ಢಿಕ್ಕಿ ಹೊಡೆದಿದ್ದು, ಮೂರು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ  ಮುಂಜಾನೆ ಜೈಪುರದಲ್ಲಿ ನಡೆದಿದೆ.

ಮೂಲಗಳ ಪ್ರಕಾರ ರಾಜಸ್ತಾನದ ಪಕ್ಷೇತರ ಶಾಸಕ ಶಿಖರ್ ನಂದ ಕಿಶೋರ್ ಪುತ್ರನಾದ ಸಿದ್ಧಾರ್ಥ್ ಮೆಹ್ರಿಯಾ ಈ ಅಪಘಾತ ಮಾಡಿದ್ದು, ಅಪಘಾತದಲ್ಲಿ ಮೂವರು ಅಸು ನೀಗಿದ್ದಾರೆ ಎಂದು  ತಿಳಿದುಬಂದಿದೆ. ಶನಿವಾರ ಮುಂಜಾನೆ ಸುಮಾರು 2 ಗಂಟೆ ಸುಮಾರಿನಲ್ಲಿ ತನ್ನ BMW ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದ ಸಿದ್ಧಾರ್ಥ್ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಆಟೋಗೆ ಢಿಕ್ಕಿ  ಹೊಡೆದಿದ್ದಾನೆ. ಈ ವೇಳೆ ಆಟೋದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಘಟನೆಯಲ್ಲಿ ಇತರೆ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಿಂದ ಕಾಲ್ಕಿತ್ತ ಸಿದ್ಧಾರ್ಥ್ ಮತ್ತೆ  ಸಮೀಪದಲ್ಲಿ ಇದ್ದ ಪೊಲೀಸ್ ವ್ಯಾನ್ ಗೂ ಢಿಕ್ಕಿ ಹೊಡೆದಿದ್ದಾನೆ. ಪ್ರಸ್ತುತ ಅಪಘಾತ ಮಾಡಿದ ಸಿದ್ಧಾರ್ಥ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಆರೋಪ ನಿರಾಕರಿಸಿದ ಶಾಸಕನ ಪುತ್ರ

ಇನ್ನು ಅಪಘಾತದ ಬಳಿಕ ಪೊಲೀಸರಿಗೆ ಸಿಕ್ಕ ಸಿದ್ಧಾರ್ಥ ಅಪಘಾತದ ಸಂದರ್ಭದಲ್ಲಿ ನಾನು ಕಾರು ಚಲಾಯಿಸುತ್ತಿರಲಿಲ್ಲ. ಕಾರಿನ ಚಾಲಕ ಕಾರು ಚಲಾಯಿಸುತ್ತಿದ್ದ ಎಂದು ಹೇಳಿ ಪ್ರಕರಣದಿಂದ  ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT