ಉತ್ತರ ಪ್ರದೇಶ 
ದೇಶ

ಉತ್ತರ ಪ್ರದೇಶ: ಬಂಧಿಸಲು ಹೋದ ಹರ್ಯಾಣ ಪೊಲೀಸ್ ಅಧಿಕಾರಿಯನ್ನೇ ದೋಚಿದ ಕಳ್ಳರು!

ಮೂರು ಜನ ಶಂಕಿತ ಕಳ್ಳರನ್ನು ಪ್ರಶ್ನಿಸಲು ಹೋದ ಹರ್ಯಾಣದ ಪೊಲೀಸ್ ಇನ್ಸ್ಪೆಕ್ಟರ್ ನ್ನೇ ಕಳ್ಳರು ದೋಚಿರುವ ಘಟನೆ ಉತ್ತರ ಪ್ರದೇಶ- ಹರ್ಯಾಣ ಗಡಿ ಭಾಗದಲ್ಲಿ ನಡೆದಿದೆ.

ಮಥುರಾ: ಮೂರು ಜನ ಶಂಕಿತ ಕಳ್ಳರನ್ನು ಬಂಧಿಸಲು ಹೋದ ಹರ್ಯಾಣದ ಪೊಲೀಸ್ ಇನ್ಸ್ಪೆಕ್ಟರ್ ನ್ನೇ ಕಳ್ಳರು ದೋಚಿರುವ ಘಟನೆ ಉತ್ತರ ಪ್ರದೇಶ- ಹರ್ಯಾಣ ಗಡಿ ಭಾಗದಲ್ಲಿ ನಡೆದಿದೆ.

ಗುರ್ಗಾಂವ್ ನ ಇನ್ಸ್ ಪೆಕ್ಟರ್ ಸುರೇಂದ್ರ ಮೂವರು ಕಳ್ಳರ ಬಗ್ಗೆ ಮಾಹಿತಿ ಪಡೆದು ಅವರನ್ನು ವಿಚಾರಣೆ ನಡೆಸಲು ತೆರಳಿದ್ದಾರೆ. ಈ ವೇಳೆ ಕಳ್ಳರೇ ಪೊಲೀಸ್ ಇನ್ಸ್ ಪೆಕ್ಟರ್ ಬಳಿ ಇದ್ದ ವಸ್ತುಗಳನ್ನು ದೋಚಿದ್ದಾರೆ. ಕಳ್ಳರನ್ನು ಬಂಧಿಸಿ ಪೊಲೀಸ್ ಠಾಣೆಯತ್ತ ಕಾರು ಚಲಾಯಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಈ ಘಟನೆ ನಡೆದಿದ್ದು ದೋಚಿದ್ದಷ್ಟೇ ಅಲ್ಲದೆ ಇನ್ಸ್ ಪೆಕ್ಟರ್ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಮಥುರಾ ಎಸ್ ಪಿ ಅರುಣ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳ್ಳರು ತಮ ಮೇಲೆ ಹಲ್ಲೆ ನಡೆಸಿದ ಬೆನ್ನಲ್ಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಈ ಮಾಹಿತಿಯನ್ನು ಸುರೇಂದ್ರ ಅವರು ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಗೆ ರವಾನಿಸಲಾಗಿದೆ, ನಂತರ ಪೊಲೀಸ್ ಠಾಣೆಯವರು ಇನ್ಸ್ ಪೆಕ್ಟರ್ ಸುರೇಂದ್ರ ಅವರನ್ನು ಕರೆದೊಯ್ದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT