ಸಾಂದರ್ಭಿಕ ಚಿತ್ರ 
ದೇಶ

ಗಂಡ-ಹೆಂಡತಿ ಜಗಳ ಬಿಡಿಸಲು ಹೋಗಿ ಹೆಣವಾದ

ಗಂಡ-ಹೆಂಡತಿಯ ಜಗಳ ಬಿಡಿಸಲು ಹೋದ ವ್ಯಕ್ತಿ ಕೊಲೆಯಾದ ಘಟನೆ ಇಲ್ಲಿನ ಕಸಾರಾ ಪಟ್ಟಣದಲ್ಲಿ...

ಥಾಣೆ: ಗಂಡ-ಹೆಂಡತಿಯ ಜಗಳ ಬಿಡಿಸಲು ಹೋದ ವ್ಯಕ್ತಿ ಸಾವನ್ನಪ್ಪಿದ ಘಟನೆ ಇಲ್ಲಿನ ಕಸಾರಾ ಪಟ್ಟಣದಲ್ಲಿ ನಡೆದಿದೆ.

ದಾಲೂ ಕಾಲೂ ಸೋನಾವಾನೆ ಎಂಬಾತ ತನ್ನ ಬಾಮೈದ ಸಂದೀಪ್ ಬುರನೆಯನ್ನು ಕತ್ತಿಯಿಂದ ಸ್ಥಳದಲ್ಲಿಯೇ ಕೊಂದು ಹಾಕಿದ್ದಾನೆ ಎಂದು ಸಹಾಪುರ್ ವಿಭಾಗದ ಉಪ ಪೊಲೀಸ್ ಆಯುಕ್ತ ವಿಶಾಲ್ ಠಾಕೂರ್ ತಿಳಿಸಿದ್ದಾರೆ.

ಸೋನ್ ವಾನೆ ಮತ್ತು ಬುರಾನೆ ಉಂಬಾರ್ಮಲಿ ಗ್ರಾಮದ ನಿವಾಸಿಗಳು. ಆರೋಪಿಯು ವಿಪರೀತ ಮದ್ಯವ್ಯಸನಿಯಾಗಿದ್ದು, ದಂಪತಿಗಳ ಮಧ್ಯೆ ಆಗಾಗ ಕಲಹವಾಗುತ್ತಿತ್ತು. ಇಂತಹ ಸಂದರ್ಭಗಳಲ್ಲೆಲ್ಲ ಬುರಾನೆ ಮಧ್ಯ ಪ್ರವೇಶಿಸಿ ದಂಪತಿಗಳನ್ನು ಸಮಾಧಾನ ಮಾಡುತ್ತಿದ್ದ.
ನಿನ್ನೆ ಕೂಡ ದಂಪತಿಗಳು ಜಗಳ ಮಾಡಿಕೊಂಡಿದ್ದು, ಬುರಾನೆ ಮಧ್ಯಪ್ರವೇಶಿಸಿ ಸಮಾಧಾನ ಮಾಡಲೆತ್ನಿಸಿದ. ಆಗ ಸಿಟ್ಟಿನಿಂದ ಸೋನಾವನೆ ಬುರಾನೆಗೆ ಜೋರಾಗಿ ಹೊಡೆದು ಕತ್ತಿಯಿಂದ ಇರಿದು ಹಾಕಿದ. ಬುರಾವನೆ ಸ್ಥಳದಲ್ಲಿಯೇ ಅಸುನೀಗಿದ. ಶವವನ್ನು ಸಹಾಪುರದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಯನ್ನು ಇದುವರೆಗೆ ಬಂಧಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT