ನರೇಂದ್ರ ಮೋದಿ 
ದೇಶ

ಸಭೆಯಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ

ಮಹತ್ವದ ಸಭೆಯಲ್ಲಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಸಚಿವರು ಪ್ರಧಾನಿ ನರೇಂದ್ರ ಮೋದಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನವದೆಹಲಿ: ಮಹತ್ವದ ಸಭೆಯಲ್ಲಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಸಚಿವರು ಪ್ರಧಾನಿ ನರೇಂದ್ರ ಮೋದಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಘಟನೆ ಮೋದಿ ಸಚಿವರ ಕಾರ್ಯಕ್ಷಮತೆ ಪರಿಶೀಲನಾ ಸಭೆ ನಡೆಸುತ್ತಿದ್ದಾಗ ನಡೆದಿದ್ದು, ಪವರ್ಪಾಯಿಂಟ್ ಪ್ರಸ್ತುತಿಗಳ ಪ್ರದರ್ಶನ ನಡೆಯುತ್ತಿರಬೇಕಾದರೆ ಕೆಲವು ಸಚಿವರುಗಳು ಮೊಬೈಲ್ ಫೋನ್ ಬಳಕೆ ಮಾಡುತ್ತಿರುವುದನ್ನು ಗಮನಿಸಿದ್ದಾರೆ. ಸ್ವತಃ ಪ್ರಧಾನಿಯವರೇ ಪವರ್ ಪಾಯಿಂಟ್ ಪ್ರಸ್ತುತಿ ಬಗ್ಗೆ ಟಿಪ್ಪಣಿ ಬರೆದುಕೊಳ್ಳುತ್ತಿದ್ದರೆ ಕೆಲವು ಸಚಿವರು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು ಇದರಿಂದ ಅಸಮಾಧಾನಗೊಂಡ ಪ್ರಧಾನಿ ನರೇಂದ್ರ ಮೋದಿ ಕೆಲವು ಗಂಟೆಗಳು ಮೊಬೈಲ್ ಬಳಕೆ ಮಾಡದೇ ಇದ್ದರೂ ಜೀವನ ನಡೆಯಲಿದೆ ಎಂದು ಸಭೆಯಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದ ಸಚಿವರನ್ನು ಪರೋಕ್ಷವಾಗಿ ತಾರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣೆಗೂ ಮುನ್ನ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವತ್ತ ಹೆಚ್ಚು ಗಮನ ನೀಡಬೇಕು, ಒಂದು ವೇಳೆ ಮೊಬೈಲ್ ನಲ್ಲೇ ಬ್ಯುಸಿಯಾಗಬೇಕಿರಬೇಕೆಂದಿದ್ದರೆ ಸಭೆಯಲ್ಲಿ ಪಾಲ್ಗೊಳ್ಳಬಾರದಿತ್ತು ಎಂದು ಮೋದಿ ಮಂತ್ರಿಮಂಡಲದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮುಂದಿನ ಸಭೆಗಳಲ್ಲಿ ಈ ರೀತಿ ಮೊಬೈಲ್ ನ್ನು ಬಳಕೆ ಮಾಡಬಾರದು ಎಂದು ಮೋದಿ ಸಚಿವರುಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT