ಸಾಂದರ್ಭಿಕ ಚಿತ್ರ 
ದೇಶ

ಪಾಂಪೊರೆ ದಾಳಿ: ಉಗ್ರರನ್ನು ಕರೆತಂದಿದ್ದ ಚಾಲಕನ ಗುರುತು ಪತ್ತೆ

ಎಂಟು ಸಿಬ್ಬಂದಿಯನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪಾಂಪೊರೆಯ ಸಿಆರ್​ಪಿಎಫ್ ಬಸ್ ಮೇಲೆ ದಾಳಿ ನಡೆಸಿದ ನಾಲ್ವರು ಉಗ್ರರನ್ನು ಕರೆತಂದಿದ್ದ ಕಾರಿನ...

ಶ್ರೀನಗರ: ಎಂಟು ಸಿಬ್ಬಂದಿಯನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪಾಂಪೊರೆಯ ಸಿಆರ್​ಪಿಎಫ್ ಬಸ್ ಮೇಲೆ ದಾಳಿ ನಡೆಸಿದ ನಾಲ್ವರು ಉಗ್ರರನ್ನು ಕರೆತಂದಿದ್ದ ಕಾರಿನ ಚಾಲಕನ ಗುರುತು ಪತ್ತೆ ಹಚ್ಚಲಾಗಿದ್ದು, ಆತನ ಬಂಧನಕ್ಕೆ ವ್ಯಾಪಕ ಶೋಧ ನಡೆಸಲಾಗುತ್ತಿದೆ.
ಕಳೆದ ಜೂನ್​ನಲ್ಲಿ ಉತ್ತರ ಕಾಶ್ಮೀರದ ಗುಲ್ಮಾರ್ಗ್ ಬಳಿ ಗಡಿ ನಿಯಂತ್ರಣ ರೇಖೆ ದಾಟಿ 4 ಲಷ್ಕರ್ ಎ ತೊಯಿಬಾ ಉಗ್ರರು ಭಾರತದೊಳಗೆ ನುಸುಳಿದ್ದರು. ಅವರನ್ನು ಶ್ರೀನಗರದಿಂದ 57 ಕಿ.ಮೀ. ದೂರದಲ್ಲಿರುವ ಬಾಬಾ ರೇಶಿ ಎಂಬ ಸ್ಥಳದಿಂದ ಟಾಟಾ ಸುಮೋ ವಾಹನದಲ್ಲಿ ಪುಲ್ವಾಮಕ್ಕೆ ಕರೆತರಲಾಗಿತ್ತು. ನಂತರ ಅವರನ್ನು ಪುಲ್ವಾಮದಲ್ಲಿ ಅಡಗಿಸಿಡಲಾಗಿತ್ತು. ಇದೇ ಉಗ್ರರು ಜೂನ್ 25 ರಂದು ಸಿಆರ್​ಪಿಎಫ್ ಬಸ್ ಮೇಲೆ ದಾಳಿ ನಡೆಸಿ 8 ಯೋಧರನ್ನು ಹತ್ಯೆ ಮಾಡಿದ್ದರು ಮತ್ತು ಹಲವರನ್ನು ಗಾಯಗೊಳಿಸಿದ್ದರು.
ಘಟನೆ ನಡೆದ ನಂತರ ಕಾರಿನ ಚಾಲಕ ಮತ್ತು ಇಬ್ಬರು ಉಗ್ರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಕಾರಿನ ಚಾಲಕ ಬಹುದಿನಗಳಿಂದ ಉಗ್ರಗಾಮಿ ಚಟುವಟಿಕೆಗಳಿಗೆ ಸಹಕರಿಸುತ್ತಿದ್ದ ಎಂಬ ಮಾಹಿತಿ ಇದ್ದರೂ ಸಹ ಸಾಕ್ಷಾಧಾರಗಳ ಕೊರತೆಯಿಂದ ಆತನ ವಿರುದ್ಧ ಇದುವರೆಗೆ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.
ಪುಲ್ವಾಮದಲ್ಲಿ ಉಳಿದುಕೊಂಡಿದ್ದ ಉಗ್ರರು ಹೆದ್ದಾರಿಯಲ್ಲಿ ಸಂಚರಿಸಿ ಬಸ್ ಮೇಲೆ ದಾಳಿ ನಡೆಸಲು ಸ್ಥಳವನ್ನು ನಿಗದಿಪಡಿಸಿಕೊಂಡಿದ್ದರು. ದಾಳಿ ನಡೆದ ದಿನವೇ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು. ನಂತರ ತಪ್ಪಿಸಿಕೊಂಡಿದ್ದ ಮೂರನೇ ಉಗ್ರನನ್ನು ಜೂನ್ 30ರಂದು ಪುಲ್ವಾಮದ ಮಾಲ್ವಾರಿ ನೇವಾ ಗ್ರಾಮದ ಬಳಿ ಹೊಡೆದುರುಳಿಸಿದ್ದರು. ನಾಲ್ಕನೇ ಉಗ್ರ ಮತ್ತು ಕಾರಿನ ಚಾಲಕನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT