ಹರ್ಯಾಣ 
ದೇಶ

ಹರ್ಯಾಣ: ಶಾಲಾ ಪಠ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಗ್ರಂಥಗಳ ಬೋಧನೆ ಅಳವಡಿಕೆ

ವಿವಿಧ ಧರ್ಮಗಳ ಪವಿತ್ರ ಗ್ರಂಥಗಳಿಂದ ಆಯ್ದ ಅಂಶಗಳನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲು ಹರ್ಯಾಣ ಸರ್ಕಾರ ಮುಂದಾಗಿದೆ.

ಚಂಡೀಗಢ: ವಿವಿಧ ಧರ್ಮಗಳ ಪವಿತ್ರ ಗ್ರಂಥಗಳಿಂದ ಆಯ್ದ ಅಂಶಗಳನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲು ಹರ್ಯಾಣ ಸರ್ಕಾರ ಮುಂದಾಗಿದೆ. ಈ ತಿಂಗಳಿನಿಂದ ಪಠ್ಯ ಕ್ರಮದಲ್ಲಿ ಪವಿತ್ರಗ್ರಂಥಗಳ ಅಂಶಗಳನ್ನು ಶಾಲೆಗಳಲ್ಲಿ ಬೋಧನೆ ಮಾಡಲಾಗುತ್ತದೆ ಎಂದು ಹರ್ಯಾಣ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮಾ ಹೇಳಿದ್ದಾರೆ.

ನೈತಿಕ ಶಿಕ್ಷಣದ ಭಾಗವಾಗಿ ಭಗವದ್ಗೀತೆ, ಕುರಾನ್, ಬೈಬಲ್, ಗುರುಗ್ರಂಥ ಸಾಹಿಬ್ ಗಳಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದ್ದು ಜು.5 ರಂದು ಕುರುಕ್ಷೇತ್ರ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪವಿತ್ರ ಗ್ರಂಥಗಳ ಅಂಶಗಳನ್ನು ಅಳವಡಿಸಲಾಗಿರುವ ಶಾಲಾ ಪಠ್ಯಪುಸ್ತಕಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ.

6 ನೇ ತರಗತಿಯಿಂದ 12 ನೇ ತರಗತಿ ವರೆಗೆ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ಒಂದು ವಿಷಯವನ್ನಾಗಿ ಬೋಧಿಸಲಾಗುತ್ತದೆ ಎಂದು ರಾಮ್ ಬಿಲಾಸ್ ಶರ್ಮಾ ತಿಳಿಸಿದ್ದಾರೆ. ಎಲ್ಲಾ ಧರ್ಮಗಳ ಪವಿತ್ರಗ್ರಂಥಗಳು ವ್ಯಕ್ತಿತ್ವ ವಿಕಸನದ ಉದ್ದೇಶವನ್ನು ಪ್ರಧಾನವಾಗಿರಿಸಿಕೊಂಡಿವೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಭಗವದ್ಗೀತೆ, ಕುರಾನ್, ಬೈಬಲ್,  ಗುರುಗ್ರಂಥ ಸಾಹಿಬ್ ಗಳಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ಬೋಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
    
ಶಿಕ್ಷಣ ತಜ್ಞರು ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಸಂಘ-ಸಂಸ್ಥೆಗಳೊಂದಿಗೆ ಸೇರಿ ವಿವಿಧ ಧರ್ಮಗಳ ಪವಿತ್ರ ಗ್ರಂಥಗಳ ಉಪದೇಶಗಳನ್ನು ಹೊಂದಿರುವ ಪಠ್ಯಪುಸ್ತಕವನ್ನು ತಯಾರಿಸಲಾಗಿದೆ. ಕಳೆದ ವರ್ಷ ಭಗವದ್ಗೀತೆಯನ್ನು ಶಾಲಾ ಪಠ್ಯ ಕ್ರಮದಲ್ಲಿ ಬೋಧಿಸುವ ಹರ್ಯಾಣ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿ, ಶಿಕ್ಷಣವನ್ನು ಕೇಸರೀಕರಣಗೊಳಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT