ತಸ್ಲೀಮಾ ನಸ್ರೀನ್ 
ದೇಶ

ಬಾಂಗ್ಲಾದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಲೇಖಕಿ ತಸ್ಲೀಮಾ ನಸ್ರೀನ್

ಭಾರತರದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಢಾಕಾದಲ್ಲಿ ನಡೆದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಾಂಗ್ಲಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಭಾರತರದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಢಾಕಾದಲ್ಲಿ ನಡೆದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಾಂಗ್ಲಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ಹೇಳಿದ್ದಾರೆ.

ಮೂಲಭೂತವಾದವನ್ನು ವಿರೋಧಿಸಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಅನೇಕ ಬ್ಲಾಗರ್, ಬರಹಗಾರರನ್ನು ಬಾಂಗ್ಲಾದಲ್ಲಿ ಹತ್ಯೆ ಮಾಡಲಾಗುತ್ತಿದೆ. ಹತ್ಯೆಯಷ್ಟೇ ಅಲ್ಲದೆ ಹಲವು ಬರಹಗಾರರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ತಪ್ಪಿಗಾಗಿ ಜೈಲು ಸೇರಿದ್ದಾರೆ ಎಂದು ತಸ್ಲೀಮಾ ನಾಸ್ರೀನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತ್ಯಾತೀತ ಬರಹಗಾರರಿಗೆ ಭದ್ರತೆ ಒದಗಿಸುವಲ್ಲಿ ಬಾಂಗ್ಲಾದೇಶದ ಸರ್ಕಾರ ವಿಫಲವಾಗಿದ್ದು ಭಯದಿಂದ ಹಲವು ಬರಹಗಾರರು ಬರವಣಿಗೆಯನ್ನೇ ಬಿಟ್ಟು ಬಾಂಗ್ಲಾದಿಂದ ಅಮೆರಿಕ, ಜರ್ಮನಿ, ಭಾರತ, ನೇಪಾಳಕ್ಕೆ ವಲಸೆ ಹೋಗುತ್ತಿದ್ದಾರೆ. ಬಾಂಗ್ಲಾದ ಢಾಕಾದಲ್ಲಿ ದಾಳಿ ನಡೆಸಿದ ಉಗ್ರರು ಬಾಂಗ್ಲಾ ಪ್ರಜೆಗಳೇ ಆಗಿದ್ದರೂ ಅವರಿಗೆ ಇಸ್ಲಾಮಿಕ್ ಉಗ್ರ ಸಂಘಟನೆ, ಅಲ್-ಖೈದಾ ಉಗ್ರ ಸಂಘಟನೆಯೊಂದಿಗೆ ಉತ್ತಮ ಸಂಪರ್ಕವಿತ್ತು ಎಂದು ತಸ್ಲೀಮಾ ನಸ್ರೀನ್ ಹೇಳಿದ್ದಾರೆ.

ಬಾಂಗ್ಲಾದಲ್ಲಿ ಉಗ್ರರ ದಾಳಿ ಹೆಚ್ಚುತ್ತಿದ್ದು, ದೇಶ ಇಸ್ಲಾಮೀಕರಣವಾಗುತ್ತಿರುವುದನ್ನು ಪ್ರಧಾನಿ ಶೇಖ್ ಹಸೀನಾ ನಿರ್ಲಕ್ಷಿಸುತ್ತಿದ್ದಾರೆ ಎಂದು ಭಾರತದಲ್ಲಿ ಆಶ್ರಯ ಪಡೆದಿರುವ ಲೇಖಕಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT