100 ಮರಳು ರಥ 
ದೇಶ

ರಥೋತ್ಸವ ಮುನ್ನಾದಿನ 100 ಮರಳಿನ ರಥ ನಿರ್ಮಿಸಿದ ಪಟ್ನಾಯಕ್

ಓಡಿಶಾದ ಪುರಿ ಜಗನ್ನಾಥನ ರಥೋತ್ಸವದ ಮುನ್ನಾದಿನ ಖ್ಯಾತ ಮರುಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿಯ...

ಭುವನೇಶ್ವರ: ಓಡಿಶಾದ ಪುರಿ ಜಗನ್ನಾಥ ರಥೋತ್ಸವದ ಮುನ್ನಾದಿನ ಖ್ಯಾತ ಮರುಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿಯ ಹತ್ತಿರದ ಬೀಚ್​ನಲ್ಲಿ ತಮ್ಮ 25 ಜನ ವಿದ್ಯಾರ್ಥಿಗಳೊಂದಿಗೆ 100 ಮರಳಿನ ರಥ ನಿರ್ಮಿಸಿ ಗಮನ ಸೆಳೆದಿದ್ದಾರೆ.
ಪುರಿ ಜಗನ್ನಾಥನ ಜಗತ್​ಪ್ರಸಿದ್ಧ ಕಟ್ಟಿಗೆಯ ರಥಯಾತ್ರೆ ನೋಡಲು ಬಂದ ಭಕ್ತ ಸಮೂಹಕ್ಕೆ ಮರುಳು ರಥಗಳು ಆಕರ್ಷಿಸಿದವು. ಶುಕ್ರವಾರದಿಂದ ರಥ ನಿರ್ವಿುಸುವ ಕಾರ್ಯ ಆರಂಭಿಸಿದ ಪಟ್ನಾಯಕ್ ಮತ್ತು ತಂಡ ಮಂಗಳವಾರ ಮದ್ಯಾಹ್ನದ ವೇಳೆಗೆ 100 ರಥಗಳನ್ನು ನಿರ್ಮಿಸಿದ್ದಾರೆ.
ಓಡಿಶಾ ಪ್ರವಾಸೋದ್ಯಮದ ಸಚಿವ ಅಶೋಕ್ ಚಂದ್ರ ಪಂಡಾ ಅವರು ಇಂದು ಮರುಳು ರಥಗಳನ್ನು ಉದ್ಘಾಟಿಸಿದರು.
ಪಟ್ನಾಯಕ್ ಮತ್ತು ಅವರ ತಂಡ 800 ಮರುಳು ಚೀಲಗಳಲ್ಲಿ 20 ತಾಸು ಕೆಲಸ ಮಾಡಿ ಈ ಸಾಧನೆ ಮಾಡಿದ್ದಾರೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿರುವುದಾಗಿ ಹೇಳಿರುವ ಪಟ್ನಾಯಕ್ ಈಗಾಗಲೇ ಲಿಮ್ಕಾ ಬುಕ್​ನಲ್ಲಿ 20 ಬಾರಿ ಪ್ರವೇಶ ಗಿಟ್ಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT