100 ಮರಳು ರಥ 
ದೇಶ

ರಥೋತ್ಸವ ಮುನ್ನಾದಿನ 100 ಮರಳಿನ ರಥ ನಿರ್ಮಿಸಿದ ಪಟ್ನಾಯಕ್

ಓಡಿಶಾದ ಪುರಿ ಜಗನ್ನಾಥನ ರಥೋತ್ಸವದ ಮುನ್ನಾದಿನ ಖ್ಯಾತ ಮರುಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿಯ...

ಭುವನೇಶ್ವರ: ಓಡಿಶಾದ ಪುರಿ ಜಗನ್ನಾಥ ರಥೋತ್ಸವದ ಮುನ್ನಾದಿನ ಖ್ಯಾತ ಮರುಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿಯ ಹತ್ತಿರದ ಬೀಚ್​ನಲ್ಲಿ ತಮ್ಮ 25 ಜನ ವಿದ್ಯಾರ್ಥಿಗಳೊಂದಿಗೆ 100 ಮರಳಿನ ರಥ ನಿರ್ಮಿಸಿ ಗಮನ ಸೆಳೆದಿದ್ದಾರೆ.
ಪುರಿ ಜಗನ್ನಾಥನ ಜಗತ್​ಪ್ರಸಿದ್ಧ ಕಟ್ಟಿಗೆಯ ರಥಯಾತ್ರೆ ನೋಡಲು ಬಂದ ಭಕ್ತ ಸಮೂಹಕ್ಕೆ ಮರುಳು ರಥಗಳು ಆಕರ್ಷಿಸಿದವು. ಶುಕ್ರವಾರದಿಂದ ರಥ ನಿರ್ವಿುಸುವ ಕಾರ್ಯ ಆರಂಭಿಸಿದ ಪಟ್ನಾಯಕ್ ಮತ್ತು ತಂಡ ಮಂಗಳವಾರ ಮದ್ಯಾಹ್ನದ ವೇಳೆಗೆ 100 ರಥಗಳನ್ನು ನಿರ್ಮಿಸಿದ್ದಾರೆ.
ಓಡಿಶಾ ಪ್ರವಾಸೋದ್ಯಮದ ಸಚಿವ ಅಶೋಕ್ ಚಂದ್ರ ಪಂಡಾ ಅವರು ಇಂದು ಮರುಳು ರಥಗಳನ್ನು ಉದ್ಘಾಟಿಸಿದರು.
ಪಟ್ನಾಯಕ್ ಮತ್ತು ಅವರ ತಂಡ 800 ಮರುಳು ಚೀಲಗಳಲ್ಲಿ 20 ತಾಸು ಕೆಲಸ ಮಾಡಿ ಈ ಸಾಧನೆ ಮಾಡಿದ್ದಾರೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿರುವುದಾಗಿ ಹೇಳಿರುವ ಪಟ್ನಾಯಕ್ ಈಗಾಗಲೇ ಲಿಮ್ಕಾ ಬುಕ್​ನಲ್ಲಿ 20 ಬಾರಿ ಪ್ರವೇಶ ಗಿಟ್ಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT