100 ಮರಳು ರಥ 
ದೇಶ

ರಥೋತ್ಸವ ಮುನ್ನಾದಿನ 100 ಮರಳಿನ ರಥ ನಿರ್ಮಿಸಿದ ಪಟ್ನಾಯಕ್

ಓಡಿಶಾದ ಪುರಿ ಜಗನ್ನಾಥನ ರಥೋತ್ಸವದ ಮುನ್ನಾದಿನ ಖ್ಯಾತ ಮರುಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿಯ...

ಭುವನೇಶ್ವರ: ಓಡಿಶಾದ ಪುರಿ ಜಗನ್ನಾಥ ರಥೋತ್ಸವದ ಮುನ್ನಾದಿನ ಖ್ಯಾತ ಮರುಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿಯ ಹತ್ತಿರದ ಬೀಚ್​ನಲ್ಲಿ ತಮ್ಮ 25 ಜನ ವಿದ್ಯಾರ್ಥಿಗಳೊಂದಿಗೆ 100 ಮರಳಿನ ರಥ ನಿರ್ಮಿಸಿ ಗಮನ ಸೆಳೆದಿದ್ದಾರೆ.
ಪುರಿ ಜಗನ್ನಾಥನ ಜಗತ್​ಪ್ರಸಿದ್ಧ ಕಟ್ಟಿಗೆಯ ರಥಯಾತ್ರೆ ನೋಡಲು ಬಂದ ಭಕ್ತ ಸಮೂಹಕ್ಕೆ ಮರುಳು ರಥಗಳು ಆಕರ್ಷಿಸಿದವು. ಶುಕ್ರವಾರದಿಂದ ರಥ ನಿರ್ವಿುಸುವ ಕಾರ್ಯ ಆರಂಭಿಸಿದ ಪಟ್ನಾಯಕ್ ಮತ್ತು ತಂಡ ಮಂಗಳವಾರ ಮದ್ಯಾಹ್ನದ ವೇಳೆಗೆ 100 ರಥಗಳನ್ನು ನಿರ್ಮಿಸಿದ್ದಾರೆ.
ಓಡಿಶಾ ಪ್ರವಾಸೋದ್ಯಮದ ಸಚಿವ ಅಶೋಕ್ ಚಂದ್ರ ಪಂಡಾ ಅವರು ಇಂದು ಮರುಳು ರಥಗಳನ್ನು ಉದ್ಘಾಟಿಸಿದರು.
ಪಟ್ನಾಯಕ್ ಮತ್ತು ಅವರ ತಂಡ 800 ಮರುಳು ಚೀಲಗಳಲ್ಲಿ 20 ತಾಸು ಕೆಲಸ ಮಾಡಿ ಈ ಸಾಧನೆ ಮಾಡಿದ್ದಾರೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿರುವುದಾಗಿ ಹೇಳಿರುವ ಪಟ್ನಾಯಕ್ ಈಗಾಗಲೇ ಲಿಮ್ಕಾ ಬುಕ್​ನಲ್ಲಿ 20 ಬಾರಿ ಪ್ರವೇಶ ಗಿಟ್ಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT