ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ (ಸಂಗ್ರಹ ಚಿತ್ರ) 
ದೇಶ

ಗೌರವ ರಕ್ಷಿಸಿಕೊಳ್ಳಲು ಇರಾನಿಯನ್ನು ವರ್ಗಾವಣೆ ಮಾಡಿದ್ದಾರೆ ಮೋದಿ: ಸಂದೀಪ್ ದೀಕ್ಷಿತ್

ಸ್ಮೃತಿ ಇರಾನಿಯವರನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆಯಾಗಿ ಮಾಡಿ ಸಾಕಷ್ಟು ಮುಜುಗರಕ್ಕೊಳಗಾಗಿದ್ದ ಮೋದಿಯವರು ತಮ್ಮ ಗೌರವವನ್ನು ರಕ್ಷಿಸಿಕೊಳ್ಳಲು ಈ ಬಾರಿ ಇರಾನಿಯವರಿಗೆ...

ನವದೆಹಲಿ: ಸ್ಮೃತಿ ಇರಾನಿಯವರನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆಯಾಗಿ ಮಾಡಿ ಸಾಕಷ್ಟು ಮುಜುಗರಕ್ಕೊಳಗಾಗಿದ್ದ ಮೋದಿಯವರು ತಮ್ಮ ಗೌರವವನ್ನು ರಕ್ಷಿಸಿಕೊಳ್ಳಲು ಈ ಬಾರಿ ಇರಾನಿಯವರಿಗೆ ಜವಳಿ ಖಾತೆಯನ್ನು ನೀಡಿದ್ದಾರೆಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು ಬುಧವಾರ ಹೇಳಿದ್ದಾರೆ.

ಕೇಂದ್ರ ಸಂಪುಟ ಪುನಾರಚನೆಯಲ್ಲಾದ ಬದಲಾವಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂದೀಪ್ ದೀಕ್ಷಿತ್ ಅವರು, ಸ್ಮೃತಿ ಇರಾನಿಯವರು ಅತ್ಯಂತ ಕೆಟ್ಟ ಶಿಕ್ಷಣ ಸಚಿವೆಯಾಗಿದ್ದರು. ಹೀಗಾಗಿ ತಮ್ಮ ಗೌರವವನ್ನು ರಕ್ಷಿಸಿಕೊಳ್ಳುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇರಾನಿಯವರ ಖಾತೆಯನ್ನು ಬದಲಾವಣೆ ಮಾಡಿದ್ದಾರೆಂದು ಹೇಳಿದ್ದಾರೆ.

ಇದೇ ವೇಳೆ ಜವಡೇಕರ್ ಅವರಿಗೆ ಖಾತೆ ನೀಡಿರುವ ಕುರಿತಂತೆ ಮಾತನಾಡಿರುವ ಅವರು, ಪರಿಸರ ಸಚಿವರಾಗಿದ್ದ ಜವಡೇಕರ್ ಅವರು ಸಾಕಷ್ಟು ವಿವಾದಕ್ಕೊಳಗಾಗಿದ್ದರು. ಜವಡೇಕರ್ ಅವರು ಅರಣ್ಯ ವಿರೋಧಿ ಸಚಿವರಾಗಿದ್ದರು. ಉದ್ಯಮಗಳ ಪರವಾಗಿದ್ದ ಅವರು, ಉದ್ಯಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಪರಿಸರ ನಾಶ ಮಾಡಿದ್ದರು. ಇದೀಗ ಶಿಕ್ಷಣ ವಲಯದಲ್ಲಿ ಮುಂದೇನು ಮಾಡುತ್ತಾರೆಂಬುದನ್ನು ಕಾದು ನೋಡಬೇಕಿದೆ. ಜವಡೇಕರ್ ಅವರು ಉತ್ತಮ ಸಚಿವರಾಗಿ ಕಾರ್ಯನಿರ್ವಹಿಸುತ್ತಾರೆಂದು ನನಗೆ ನಂಬಿಕೆಯಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT