ಸಂತೋಷ್ ಗಂಗ್ವಾರ್ 
ದೇಶ

ಜಿಎಸ್ ಟಿ ಮಸೂದೆ ಅಂಗೀಕಾರ ಸರ್ಕಾರದ ಆದ್ಯತೆ: ಹಣಕಾಸು ಇಲಾಖೆ ರಾಜ್ಯ ಸಚಿವ ಗಂಗ್ವಾರ್

ಜಿಎಸ್ ಟಿ ಮಸೂದೆ ಅಂಗೀಕರಿಸುವುದು ಕೇಂದ್ರ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದದ್ದು ಎಂದು ಹಣಕಾಸು ಇಲಾಖೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ನವದೆಹಲಿ: ಜಿಎಸ್ ಟಿ ಮಸೂದೆ ಅಂಗೀಕರಿಸುವುದು ಕೇಂದ್ರ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದದ್ದು ಎಂದು ಹಣಕಾಸು ಇಲಾಖೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ಹಣಕಾಸು ಇಲಾಖೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತೋಷ್ ಗಂಗ್ವಾರ್ ಹಾಗೂ ಅರ್ಜುನ್ ರಾಮ್ ಮೇಘ್ ವಾಲ್, ಪ್ರಸಕ್ತ ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆಯನ್ನು ಅಂಗೀಕಾರ ಮಾಡುವುದು ಸರ್ಕಾರದ ಆದ್ಯತೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸಚಿವರು ಅಧಿಕಾರ ವಹಿಸಿಕೊಂಡ ವೇಳೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಸಹ ಉಪಸ್ಥಿತರಿದ್ದರು. ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವುದಕ್ಕೂ ಮುನ್ನ ಸಂತೋಷ್ ಗಂಗ್ವಾರ್ ಜವಳಿ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ರಾಜ್ಯ ಖಾತೆಯ ಮತ್ತೋರ್ವ ಸಚಿವ ಅರ್ಜುನ್ ರಾಮ್ ಮೇಘ್ ವಾಲ್ ಮಾಜಿ ಅಧಿಕಾರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT