ಸಂತೋಷ್ ಗಂಗ್ವಾರ್ 
ದೇಶ

ಜಿಎಸ್ ಟಿ ಮಸೂದೆ ಅಂಗೀಕಾರ ಸರ್ಕಾರದ ಆದ್ಯತೆ: ಹಣಕಾಸು ಇಲಾಖೆ ರಾಜ್ಯ ಸಚಿವ ಗಂಗ್ವಾರ್

ಜಿಎಸ್ ಟಿ ಮಸೂದೆ ಅಂಗೀಕರಿಸುವುದು ಕೇಂದ್ರ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದದ್ದು ಎಂದು ಹಣಕಾಸು ಇಲಾಖೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ನವದೆಹಲಿ: ಜಿಎಸ್ ಟಿ ಮಸೂದೆ ಅಂಗೀಕರಿಸುವುದು ಕೇಂದ್ರ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದದ್ದು ಎಂದು ಹಣಕಾಸು ಇಲಾಖೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ಹಣಕಾಸು ಇಲಾಖೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತೋಷ್ ಗಂಗ್ವಾರ್ ಹಾಗೂ ಅರ್ಜುನ್ ರಾಮ್ ಮೇಘ್ ವಾಲ್, ಪ್ರಸಕ್ತ ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆಯನ್ನು ಅಂಗೀಕಾರ ಮಾಡುವುದು ಸರ್ಕಾರದ ಆದ್ಯತೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸಚಿವರು ಅಧಿಕಾರ ವಹಿಸಿಕೊಂಡ ವೇಳೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಸಹ ಉಪಸ್ಥಿತರಿದ್ದರು. ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವುದಕ್ಕೂ ಮುನ್ನ ಸಂತೋಷ್ ಗಂಗ್ವಾರ್ ಜವಳಿ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ರಾಜ್ಯ ಖಾತೆಯ ಮತ್ತೋರ್ವ ಸಚಿವ ಅರ್ಜುನ್ ರಾಮ್ ಮೇಘ್ ವಾಲ್ ಮಾಜಿ ಅಧಿಕಾರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT