ಪ್ರಾಕಶ್ ಜಾವ್ಡೇಕರ್ ಮತ್ತು ಸ್ಮೃತತಿ ಇರಾನಿ 
ದೇಶ

ಎಚ್ ಆರ್ ಡಿ ಖಾತೆ ಕಳೆದುಕೊಂಡ ಸ್ಮೃತಿ ಇರಾನಿಗೆ ಜವಳಿ ಹೊಣೆಗಾರಿಕೆ

ಸಂಪುಟದಲ್ಲಿ ಮಹತ್ವದ ಖಾತೆ ಪಡೆದುಕೊಂಡಿದ್ದ ಸ್ಮೃತಿ ಇರಾನಿ ಮಾನವ ಸಂಪನ್ಮೂಲ ಕಳೆದುಕೊಂಡು ಜವಳಿ ಖಾತೆಗೆ ಶಿಫ್ಟ್ ಆಗಿದ್ದಾರೆ. ಸ್ಮೃತಿ ಇರಾನಿ ಅಧಿಕಾರ ...

ನವದೆಹಲಿ: ಹಲವು ದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಕೇಂದ್ರ ಸಂಪುಟ ಪುನಾರಚನೆ ಮುಗಿದಿದ್ದು, ಮಹತ್ವದ ಖಾತೆಗಳನ್ನು ವಹಿಸಿಕೊಂಡು ಹಲವು ವಿವಾದಗಳಿಗೆ ಸಿಕ್ಕಿದ್ದ ಸಚಿವರಿಗೆ  ಪ್ರಧಾನಿ ನರೇಂದ್ರ ಮೋದಿ ಹಿಂಬಡ್ತಿ ನೀಡಿದ್ದಾರೆ.

ಸಂಪುಟದಲ್ಲಿ ಮಹತ್ವದ ಖಾತೆ ಪಡೆದುಕೊಂಡಿದ್ದ ಸ್ಮೃತಿ ಇರಾನಿ ಮಾನವ ಸಂಪನ್ಮೂಲ ಕಳೆದುಕೊಂಡು ಜವಳಿ ಖಾತೆಗೆ ಶಿಫ್ಟ್ ಆಗಿದ್ದಾರೆ. ಸ್ಮೃತಿ ಇರಾನಿ ಅಧಿಕಾರ ವಹಿಸಿಕೊಂಡಾಗಿನಿಂದ ಕೆಲಸ ಮಾಡಿದ್ದಕ್ಕಿಂತ ಬರೀ ಗದ್ದಲ ಮಾಡಿದ್ದೇ ಹೆಚ್ಚು ಹೀಗಾಗಿ ಅವರು ಮಹತ್ವದ ಖಾತೆ ಕಳೆದುಕೊಳ್ಳಬೇಕಾಯಿತು ಎಂದು ಹೆಸರು ಹೇಳಲು ಇಚ್ಚಿಸದ ಇರಾನಿ ಸಂಪುಟ ಸಹೋದ್ಯೋಗಿ ತಿಳಿಸಿದ್ದಾರೆ.

ಜೊತೆಗೆ ಡಿವಿ ಸದಾನಂದ ಗೌಡರ ಕೈಯಿಂದ ಕಾನೂನು ಖಾತೆ ಕೈತಪ್ಪಿದ್ದು, ಸ್ಟ್ಯಾಟಿಸ್ಟಿಕ್ಸ್ ಎಂಡ್ ಪ್ರೊಗ್ರಾಮ್ ಇಪ್ಲಿಮೆಂಟೇಶನ್ ಖಾತೆ ನೀಡಲಾಗಿದೆ. ಐಟಿ ಖಾತೆ ಸಚಿವ ರವಿಶಂಕರ್ ಪ್ರಸಾದ್ ಗೆ ಹೆಚ್ಚುವರಿಯಾಗಿ ಕಾನೂನು ಖಾತೆ ಜವಾಬ್ದಾರಿ ವಹಿಸಲಾಗಿದೆ. ವೆಂಕಯ್ಯ ನಾಯ್ಡುಗೆ ಹೆಚ್ಚುವರಿಯಾಗಿ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಜವಾಬ್ದಾರಿ ನೀಡಲಾಗಿದೆ.

2014 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದು ಚುನಾವಣೆಯಲ್ಲಿ ಜಯಗಳಿಸಿದ್ದ ಹರ್ಯಾಣ ನಾಯಕ ಚೌದರಿ ಬಿರೇಂದರ್ ಸಿಂಗ್ ಅವರಿಗೆ ಕಬ್ಬಿಣ ಮತ್ತು ಉಕ್ಕು ಖಾತೆ ನೀಡಲಾಗಿದೆ.

ಸಂಪುಟ ಪುನಾರಚನೆಯನ್ನು  ಆರ್ ಎಸ್ ಎಸ್ ನಿರ್ವಹಿಸಿದ್ದು ತಮ್ಮ ಖಾತೆಗಳಲ್ಲಿ ಕಡಿಮೆ ಫರ್ಪಾಮೆನ್ಸ್ ತೋರಿದ ಸಚಿವರನ್ನು ಕೈಬಿಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಚಿಸಿತ್ತು ಎನ್ನಲಾಗಿದೆ.

ಪ್ರಧಾನಿಯವರ ಆಪ್ತರಾಗಿರುವ ತಾವರ್ ಚಂದ್ ಗೆಹ್ಲೋಟ್ ಮತ್ತು ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರ ಖಾತೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!