ಪ್ರಕಾಶ್ ಜಾವಡೆಕರ್ 
ದೇಶ

ಮುಷ್ಕರಕ್ಕೆ ಮಾತುಕತೆಯೇ ಮದ್ದು: ನೂತನ ಎಚ್ಆರ್ ಡಿ ಸಚಿವ ಜಾವಡೆಕರ್

ಮುಷ್ಕರಕ್ಕೆ ಮಾತುಕತೆಯೇ ಮದ್ದು ಎಂದಿರುವ ನೂತನ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೆಕರ್ ಅವರು, ಪಕ್ಷದ ರಾಜಕೀಯ ಮಾಡುವುದಕ್ಕೆ...

ನವದೆಹಲಿ: ಮುಷ್ಕರಕ್ಕೆ ಮಾತುಕತೆಯೇ ಮದ್ದು ಎಂದಿರುವ ನೂತನ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೆಕರ್ ಅವರು, ಪಕ್ಷದ ರಾಜಕೀಯ ಮಾಡುವುದಕ್ಕೆ ಶಿಕ್ಷಣ ಬೇಕಾಗಿಲ್ಲ ಎಂದು ಹೇಳಿದ್ದಾರೆ.
ಈ ವಿವಾದಗಳಿಂದಲೇ ಸುದ್ದಿ ಮಾಡಿದ್ದ ಮಾಜಿ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಸ್ಥಾನಕ್ಕೆ ಪ್ರಕಾಶ್ ಜಾವಡೆಕರ್ ಬಂದಿದ್ದು, ಸಲಹೆ ಸೂಚನೆಗಳನ್ನು ನಾನು ಮುಕ್ತವಾಗಿ ಸ್ವೀಕರಿಸುತ್ತೇನೆ ಮತ್ತು ಎಲ್ಲರೊಂದಿಗೆ ತಾವು ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.
ಇಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಮಾನವ ಸಂಪನ್ಮೂಲ ಸಚಿವೆಯಾಗಿ ಸ್ಮೃತಿ ಇರಾನಿ ಅವರು ಶಿಕ್ಷಣದ ಗುಣಮಟ್ಟ ಸುಧಾರಣೆ, ವಿದ್ಯಾರ್ಥಿಗಳಿಗೆ ಕಲಿಕಾ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಂಡಿದ್ದಾರೆ ಎಂದರು.
ಮಾನವ ಸಂಪನ್ಮೂಲ ಸಚಿವಾಲಯವು ಕಳೆದೆರಡು ವರ್ಷಗಳಲ್ಲಿ ಕೈಗೊಂಡಿರುವ ಉಪಕ್ರಮಗಳನ್ನು ಮುಂದುವರೆಸುವುದಾಗಿ ಪ್ರಕಾಶ ಜಾವಡೆಕರ್ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಮುಷ್ಕರಗಳಿಂದಲೇ ನಾನು ಬೆಳೆದು ಬಂದಿದ್ದೇನೆ. ಹೀಗಾಗಿ ನಾನು ಪ್ರತಿಯೊಬ್ಬರೊಂದಿಗೂ ಚರ್ಚೆಗೆ ಸಿದ್ಧನಿದ್ದೇನೆ. ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರೆ ಅಲ್ಲಿ ಪ್ರತಿಭಟನೆ ಅಥವಾ ಮುಷ್ಕರ ನಡೆಸುವ ಅಗತ್ಯವೇ ಇರುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT