ಹಿಂದೂ ವ್ಯಕ್ತಿಯ ಶವ ಸಂಸ್ಕಾರ ನಡೆಸುತ್ತಿರುವ ಮುಸ್ಲಿಂ ಮಹಿಳೆ 
ದೇಶ

ತಂದೆಯ ಅಂತ್ಯ ಸಂಸ್ಕಾರ ನಡೆಸದ ಮಗ: ಹಿಂದೂ ಸಂಪ್ರದಾಯದಂತೆ ಸಂಸ್ಕಾರ ಪೂರೈಸಿದ ಮುಸ್ಲಿಂ ಮಹಿಳೆ

ಮಾನವೀಯತೆ ಪದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬಹುಶಃ ಸಿಗಲಾರದು. ವೃದ್ಧಾಶ್ರಮದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಅಂತಿಮ ಸಂಸ್ಕಾರವನ್ನು ಉಸ್ತುವಾರಿ ...

ವಾರಂಗಲ್: ಮಾನವೀಯತೆ ಪದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬಹುಶಃ ಸಿಗಲಾರದು. ವೃದ್ಧಾಶ್ರಮದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಅಂತಿಮ ಸಂಸ್ಕಾರವನ್ನು ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಸ್ಲಿಂ ಮಹಿಳೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ವಾರಾಂಗಲ್ ನ ಹನ್ಮಕೊಂಡದ ಸಹೃದಯ ವೃದ್ದಾಶ್ರಮದಲ್ಲಿ  75 ವರ್ಷದ ಕೀರ್ತಿ ಶ್ರೀನಿವಾಸ್ ಎಂಬ ದೀರ್ಘಕಾಲದ ಅನಾರೋಗ್ಯದಿಂದ ಮೃತ ಪಟ್ಟಿದ್ದರು.

ಈ ವಿಷಯನ್ನು ಕೀರ್ತಿ ಶ್ರೀನಿವಾಸ್ ಪುತ್ರ ಶರತ್ ಗೆ ತಿಳಿಸಲಾಯಿತು, ಆದರೆ ಆತ ತಾನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಅಂತಿಮ ವಿಧಿವಿಧಾನಗಳನ್ನು ನೆರೆವೇರಿಸಲು ಸಾಧ್ಯವಿಲ್ಲ ಎಂದು ಹೇಳಿ ಅಲ್ಲಿಂದ ಹೊರಟು ಹೋದ. ನಂತರ ಬಂದ ಸಂಬಂಧಿಕರು ಭೇಟಿ ನೀಡಿ ಯಾವುದೇ ಜವಾಬ್ದಾರಿ ತೆಗೆದುಕೊಳ್ಳದೇ ನುಣುಚಿಕೊಂಡರು.

ನಂತರ ಕೀರ್ತಿ ಶ್ರೀನಿವಾಸ್ ಅವರನ್ನು ನೋಡಿಕೊಳ್ಳುತ್ತಿದ್ದ ಮುಸ್ಲಿಂ ಮಹಿಳೆ ಯಾಕೂಬಿ ಹಿಂದೂ ವಿಧಿ ವಿಧಾನದಂತೆ ತಾನೇ ಮೃತ ವ್ಯಕ್ತಿಯ ಅಂತಿಮ ಸಂಸ್ಕಾರ ನಡೆಸುವುದಾಗಿ ನಿರ್ಧರಿಸಿದರು. ಅದರಂತೆ ಶವದ ಮೆರವಣಿಗೆಯಲ್ಲಿ, ಹೆಗಲ ಮೇಲೆ ಮಡಕೆ ಹೊತ್ತು,ಕೊಂಡು ಹೋಗಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT