ಜಾಕಿರ್ ನಾಯಕ್ - ದಿಗ್ವಿಜಯ್ ಸಿಂಗ್ 
ದೇಶ

ಜಾಕಿರ್ ನಾಯಕ್ ನನ್ನು 'ಶಾಂತಿದೂತ' ಎಂದಿದ್ದ ದಿಗ್ವಿಜಯ್ ಸಿಂಗ್ ಗೆ ಸಂಕಷ್ಟ

ವಿವಾದಿತ ಬೋಧಕ, ಮೌಲ್ವಿ ಜಾಕಿರ್ ನಾಯಕ್ ಅವರನ್ನು ಶಾಂತಿದೂತ ಎಂದು ಕರೆದಿದ್ದ ಹಿರಿಯ ಕಾಂಗ್ರೆಸ್​ನಾಯಕ ದಿಗ್ವಿಜಯ್ ಸಿಂಗ್ ಅವರಿಗೆ ಈಗ ಸಂಕಷ್ಟ...

ನವದೆಹಲಿ: ವಿವಾದಿತ ಬೋಧಕ, ಮೌಲ್ವಿ ಜಾಕಿರ್ ನಾಯಕ್ ಅವರನ್ನು ಶಾಂತಿದೂತ ಎಂದು ಕರೆದಿದ್ದ ಹಿರಿಯ ಕಾಂಗ್ರೆಸ್​ನಾಯಕ ದಿಗ್ವಿಜಯ್ ಸಿಂಗ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ.
2012ರಲ್ಲಿ ಕಾರ್ಯಕ್ರಮವೊಂದರಲ್ಲಿ ವೇದಿಕೆ ಜಾಕಿರ್ ನಾಯ್ ನೊಂದಿಗೆ ವೇದಿಕೆ ಹಂಚಿಕೊಂಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಅಲ್ಲದೆ ಈ ವಿಡಿಯೋದಲ್ಲಿ ದಿಗ್ವಿಜಯ್ ಸಿಂಗ್ ನಾಯಕ್ ನನ್ನು ಶಾಂತಿದೂತ ಎಂದು ಕರೆದಿದ್ದಾರೆ. ಅಲ್ಲದೆ ಜಾಕಿರ್​ಗೆ ಆತ್ಮೀಯ ಅಪ್ಪುಗೆ ನೀಡಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. 
ಢಾಕಾದ ಉಗ್ರರು ಜಾಕಿರ್ ಮಾತುಗಳಿಂದ ಉತ್ತೇಜಿತರಾಗಿ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 20 ಜನರ ದಾರುಣ ಸಾವಿಗೆ ಕಾರಣವಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ದಿಗ್ವಿಜಯ್, ಜಾಕಿರ್ ಅಪ್ಪುಗೆಯ ಚಿತ್ರಗಳು ‘ಫ್ರೆಂಡ್’ ಎಂಬ ನಾಮಕರಣದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್, ಅಂದು ನಾನು ಕೋಮುಸೌಹಾರ್ದದ ಬಗ್ಗೆ ಮಾತನಾಡಿದ್ದೇನೆ. ಜಾಕಿರ್ ನಾಯಕ್ ಐಎಸ್ಐಎಸ್ ನೊಂದಿಗೆ ಸಂಪರ್ಕ ಹೊಂದಿರುವ ಬಗ್ಗೆ ಸಾಕ್ಷ್ಯಗಳಿದ್ದರೆ ಬಾಂಗ್ಲಾದೇಶ ಕ್ರಮ ಕೈಗೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಈ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡರು, ಕಾಂಗ್ರೆಸ್​ನವರು ಉಗ್ರರಿಗೆ ಮತ್ತು ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುವುದು ಹೊಸ ವಿಷಯವೇನಲ್ಲ ಎಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಾಕಿರ್, ನಾನು ಮುಸ್ಲಿಂರಿಗೆ ಸಮಾಜದ ದುಷ್ಟಶಕ್ತಿ ವಿರುದ್ಧ ಹೋರಾಡಲು ಉಗ್ರವಾದ ಮೈಗೂಡಿಸಿಕೊಳ್ಳಿ ಎಂದು ಬೋಧನೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT