ಅಪಘಾತಕ್ಕೀಡಾದ ಬಿಎಂಡಬ್ಲ್ಯೂ ಕಾರು 
ದೇಶ

ಬಿಎಂಡಬ್ಲ್ಯೂ ಕಾರು ಅಪಘಾತ ಪ್ರಕರಣ: ಘಟನೆಗೂ ಮುನ್ನ ಮದ್ಯ ಸೇವಿಸಿದ್ದ ಶಾಸಕನ ಪುತ್ರ

ರಾಜಸ್ತಾನ ಪಕ್ಷೇತರ ಶಾಸಕ ನಂದ ಕಿಶೋರ್ ಮಹಾರಿಯಾ ಪುತ್ರ ಸಿದ್ದಾರ್ಥ್ ಮಹಾರಿಯಾ ತನ್ನ ಬಿಎಂ ಡಬ್ಲ್ಯೂ ಕಾರು ಡಿಕ್ಕಿ ಹೊಡೆದು ಆಟೋ ರಿಕ್ಷಾದಲ್ಲಿದ್ದ ಮೂವರು ಸಾವನ್ನಪ್ಪಿದ್ದ

ಜೈಪುರ: ರಾಜಸ್ತಾನ ಪಕ್ಷೇತರ ಶಾಸಕ ನಂದ ಕಿಶೋರ್ ಮಹಾರಿಯಾ ಪುತ್ರ ಸಿದ್ದಾರ್ಥ್ ಮಹಾರಿಯಾ ತನ್ನ ಬಿಎಂ ಡಬ್ಲ್ಯೂ ಕಾರು ಗುದ್ದಿ ಆಟೋ ರಿಕ್ಷಾದಲ್ಲಿದ್ದ ಮೂವರು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಪೊಲೀಸರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದಾರೆ.

ಅಪಘಾತ ನಡೆಯುವುದಕ್ಕೂ ಮುನ್ನ ಸಿದ್ದಾರ್ಥ್ ಬಾರ್ ವೊಂದಕ್ಕೆ ತೆರಳಿ ಮದ್ಯ ಸೇವಿಸಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ.

ಜುಲೈ 2ನೇ ತಾರೀಖಿನ ಮಧ್ಯರಾತ್ರಿ ಅಪಘಾತ ನಡೆಯುವ ಎರಡು ಗಂಟೆಗೂ ಮುನ್ನ ಶಾಸಕನ ಪುತ್ರ ಮತ್ತವನ ಜೊತೆ ಇದ್ದ ಮೂವರು ವ್ಯಕ್ತಿಗಳು ಮಧ್ಯ ಸೇವಿಸಿದ್ದರು.

ಡ್ರೈವರ್ ಸೀಟಿನಲ್ಲಿದ್ದ ಸಿದ್ದಾರ್ಥ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಮೂರು ಮಂದಿಯ ಸಾವಿಗೆ ಕಾರಣನಾಗಿದ್ದ, ನಂತರ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದಿದ್ದ ಸಿದ್ದಾರ್ಥ್ ಬಿಎಂಡಬ್ಲ್ಯೂ ಕಾರು ಪೊಲೀಸರು ಸೇರಿ ನಾಲ್ವರನ್ನು ಗಾಯಗೊಳಿಸಿತ್ತು. ಈ ಸಂಬಂಧ ಸಿದ್ದಾರ್ಥ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಅಪಘಾತ ನಡೆದ ಸಮಯದಲ್ಲಿ ಚಾಲಕ ಡ್ರೈವಿಂಗ್ ಮಾಡುತ್ತಿದ್ದ. ಆತ ಕುಡಿದಿರಲಿಲ್ಲ ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT