ಸಿಬಿಐ ಅಧಿಕಾರಿಗಳು ಬಂಧಿಸಿದ್ದ ದೆಹಲಿ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಕೇಜ್ರಿವಾಲ್ ಮಾಜಿ ಪ್ರಧಾನ ಕಾರ್ಯದರ್ಶಿ ವಿರುದ್ಧ ಭ್ರಷ್ಟಾಚಾರ ಆರೋಪ: ಮತ್ತೆ ಇಬ್ಬರ ಬಂಧನ

ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅಮಾನತ್ತಿಗೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ಕೇಸಿನಲ್ಲಿ ಸಿಬಿಐ...

ನವದೆಹಲಿ: ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅಮಾನತ್ತಿಗೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ಕೇಸಿನಲ್ಲಿ ಸಿಬಿಐ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿದ್ದಾರೆ.
ದೆಹಲಿ ಸರ್ಕಾರದ ಜಾಗೃತ ಸಂವಹನ ವ್ಯವಸ್ಥೆ ಇಂಡಿಯಾ ಲಿಮಿಟೆಡ್ ಎಂಬ ಸಾರ್ವಜನಿಕ ವಲಯ ಘಟಕದ ಮಾಜಿ ಮತ್ತು ಈಗಿನ ವ್ಯವಸ್ಥಾಪಕ ನಿರ್ದೇಶಕರಾದ ಆರ್. ಎಸ್.ಕೌಶಿಕ್ ಮತ್ತು ಜಿ.ಕೆ.ನಂದಾ ಅವರನ್ನು ಬಂಧಿಸಿದ್ದು, ಟೆಂಡರ್ ನೀಡಿಕೆಯಲ್ಲಿ ಅಕ್ರಮವಾಗಿ ಖಾಸಗಿ ಕಂಪೆನಿಗೆ ಅನುಕೂಲ ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ. ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ಕರೆದವರಿಗೆ ಬೆದರಿಕೆಯೊಡ್ಡುತ್ತಿದ್ದ ಆರೋಪವೂ ಇವರ ಮೇಲಿದೆ.
ಈ ಇಬ್ಬರ ಬಂಧನದಿಂದಾಗಿ  ಸಿಬಿಐ ಅಧಿಕಾರಿಗಳು ಬಂಧಿಸಿದ ಆರೋಪಿಗಳ ಸಂಖ್ಯೆ 6ಕ್ಕೇರಿದೆ. ರಾಜೇಂದ್ರ ಕುಮಾರ್ ಅವರಲ್ಲದೆ ಮುಖ್ಯಮಂತ್ರಿ ಕೇಜ್ರಿವಾಲ್ ಸರ್ಕಾರದಲ್ಲಿದ್ದ ಉಪ ಕಾರ್ಯದರ್ಶಿ ತರುಣ್ ಶರ್ಮಾ, ಎಂಡೀವರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ನ ಇಬ್ಬರು ಮಾಲೀಕರಾದ ಸಂದೀಪ್ ಕುಮಾರ್ ಮತ್ತು ದಿನೇಶ್ ಗುಪ್ತಾ ಅವರನ್ನು ಬಂಧಿಸಲಾಗಿದೆ. ಮೊನ್ನೆ ಶುಕ್ರವಾರ ಸಿಬಿಐ ಅಧಿಕಾರಿಗಳು ಆರು ಕಡೆಯಲ್ಲಿ ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT