ಪರಮ್ ದೇವ್ ಯಾದವ್ 
ದೇಶ

ಬಿಎಸ್ ಪಿ ರಾಷ್ಟ್ರೀಯ ಕಾರ್ಯದರ್ಶಿ ಪರಮ್ ದೇವ್ ಯಾದವ್ ಪಕ್ಷಕ್ಕೆ ರಾಜಿನಾಮೆ

ಉತ್ತರ ಪ್ರದೇಶ ಚುನಾವಣೆ ಹತ್ತಿರವಾಗುತ್ತಿದಂತೆ ಬಿಎಸ್ ಪಿ ಪಕ್ಷದಲ್ಲಿ ಭಿನ್ನಮತವು ಹೆಚ್ಚುತ್ತಿದ್ದು, ಪ್ರಮುಖ ನಾಯಕರ ರಾಜೀನಾಮೆ ಸರಣಿ ಮುಂದುವರೆದಿದೆ.

ಲಖನೌ: ಉತ್ತರ ಪ್ರದೇಶ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಎಸ್ ಪಿ ಪಕ್ಷದಲ್ಲಿ ಭಿನ್ನಮತವು ಹೆಚ್ಚುತ್ತಿದ್ದು, ಪ್ರಮುಖ ನಾಯಕರ ರಾಜೀನಾಮೆ ಸರಣಿ ಮುಂದುವರೆದಿದೆ.

ಇತ್ತೀಚೆಗಷ್ಟೇ ಪಕ್ಷದ ಹಿರಿಯ ನಾಯಕ ರವೀಂದ್ರ ನಾಥ್ ತ್ರಿಪಾಠಿ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ, ಬಿಎಸ್ ಪಿ ರಾಷ್ಟ್ರೀಯ ಕಾರ್ಯದರ್ಶಿ ಪರಮ್ ದೇವ್ ಯಾದವ್ ರಾಜೀನಾಮೆ ನೀಡಿದ್ದಾರೆ. 35 ವರ್ಷಗಳ ಕಾಲ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಪರಮ್ ದೇವ್ ಯಾದವ್, ಮಾಯಾವತಿ ಪಕ್ಷದಲ್ಲಿ ದಲಿತರ ಹಿತಾಸಕ್ತಿಗಳನ್ನು ಹಣವಿರುವವರಿಗೆ ಅಡ ಇಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಎಸ್ ಪಿ ಪಕ್ಷ ದುಡ್ಡು ಕೊಟ್ಟರೆ ಟಿಕೆಟ್ ಇಂದ ಹಿಡಿದು ಏನನ್ನು ಬೇಕಾದರೂ ಪಡೆಯಬಹುದಾದ ಅಂಗಡಿಯಂತಾಗಿದೆ, ಪಕ್ಷಕ್ಕೆ ನಿಷ್ಠೆ ಹೊಂದದೆ ಇರುವವರನ್ನು ಎಂಎಲ್ ಸಿ ಗಳನ್ನಾಗಿ ಮಾಡಲಾಗಿದೆ ಎಂದು ಪರಮ್ ದೇವ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಬಿಎಸ್ ಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಪರಮ್ ದೇವ್ ಯಾದವ್ ತಮ್ಮ ಮುಂದಿನ ರಾಜಕೀಯ ನಡೆಯನ್ನು ತಿಳಿಸಿಲ್ಲವಾದರೂ, ಬಿಜೆಪಿ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ. ಮಾಯಾವತಿ ದಲಿತ ಸಿದ್ಧಾಂತದಿಂದ ದೂರವಾಗಿದ್ದಾರೆ ಎಂದು ಆರೋಪಿಸಿ ಕಳೆದ ವಾರ ಪಕ್ಷದ ಪ್ರಮುಖ ನಾಯಕ ರವೀಂದ್ರನಾಥ್ ತ್ರಿಪಾಠಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT