ಪರಮ್ ದೇವ್ ಯಾದವ್ 
ದೇಶ

ಬಿಎಸ್ ಪಿ ರಾಷ್ಟ್ರೀಯ ಕಾರ್ಯದರ್ಶಿ ಪರಮ್ ದೇವ್ ಯಾದವ್ ಪಕ್ಷಕ್ಕೆ ರಾಜಿನಾಮೆ

ಉತ್ತರ ಪ್ರದೇಶ ಚುನಾವಣೆ ಹತ್ತಿರವಾಗುತ್ತಿದಂತೆ ಬಿಎಸ್ ಪಿ ಪಕ್ಷದಲ್ಲಿ ಭಿನ್ನಮತವು ಹೆಚ್ಚುತ್ತಿದ್ದು, ಪ್ರಮುಖ ನಾಯಕರ ರಾಜೀನಾಮೆ ಸರಣಿ ಮುಂದುವರೆದಿದೆ.

ಲಖನೌ: ಉತ್ತರ ಪ್ರದೇಶ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಎಸ್ ಪಿ ಪಕ್ಷದಲ್ಲಿ ಭಿನ್ನಮತವು ಹೆಚ್ಚುತ್ತಿದ್ದು, ಪ್ರಮುಖ ನಾಯಕರ ರಾಜೀನಾಮೆ ಸರಣಿ ಮುಂದುವರೆದಿದೆ.

ಇತ್ತೀಚೆಗಷ್ಟೇ ಪಕ್ಷದ ಹಿರಿಯ ನಾಯಕ ರವೀಂದ್ರ ನಾಥ್ ತ್ರಿಪಾಠಿ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ, ಬಿಎಸ್ ಪಿ ರಾಷ್ಟ್ರೀಯ ಕಾರ್ಯದರ್ಶಿ ಪರಮ್ ದೇವ್ ಯಾದವ್ ರಾಜೀನಾಮೆ ನೀಡಿದ್ದಾರೆ. 35 ವರ್ಷಗಳ ಕಾಲ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಪರಮ್ ದೇವ್ ಯಾದವ್, ಮಾಯಾವತಿ ಪಕ್ಷದಲ್ಲಿ ದಲಿತರ ಹಿತಾಸಕ್ತಿಗಳನ್ನು ಹಣವಿರುವವರಿಗೆ ಅಡ ಇಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಎಸ್ ಪಿ ಪಕ್ಷ ದುಡ್ಡು ಕೊಟ್ಟರೆ ಟಿಕೆಟ್ ಇಂದ ಹಿಡಿದು ಏನನ್ನು ಬೇಕಾದರೂ ಪಡೆಯಬಹುದಾದ ಅಂಗಡಿಯಂತಾಗಿದೆ, ಪಕ್ಷಕ್ಕೆ ನಿಷ್ಠೆ ಹೊಂದದೆ ಇರುವವರನ್ನು ಎಂಎಲ್ ಸಿ ಗಳನ್ನಾಗಿ ಮಾಡಲಾಗಿದೆ ಎಂದು ಪರಮ್ ದೇವ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಬಿಎಸ್ ಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಪರಮ್ ದೇವ್ ಯಾದವ್ ತಮ್ಮ ಮುಂದಿನ ರಾಜಕೀಯ ನಡೆಯನ್ನು ತಿಳಿಸಿಲ್ಲವಾದರೂ, ಬಿಜೆಪಿ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ. ಮಾಯಾವತಿ ದಲಿತ ಸಿದ್ಧಾಂತದಿಂದ ದೂರವಾಗಿದ್ದಾರೆ ಎಂದು ಆರೋಪಿಸಿ ಕಳೆದ ವಾರ ಪಕ್ಷದ ಪ್ರಮುಖ ನಾಯಕ ರವೀಂದ್ರನಾಥ್ ತ್ರಿಪಾಠಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT