ಆರ್.ಕೆ.ಪಚೌರಿ 
ದೇಶ

ಆರ್.ಕೆ.ಪಚೌರಿಗೆ ಜಾಮೀನು, ವಿದೇಶ ಪ್ರಯಾಣಕ್ಕೆ ಅನುಮತಿ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಇಂಧನ ಮತ್ತು ಸಂಪನ್ಮೂಲ ಸಂಸ್ಥೆಯ (ತೇರಿ) ನಿರ್ದೇಶಕ ಆರ್‌.ಕೆ. ಪಚೌರಿ ಅವರಿಗೆ ದೆಹಲಿ ಕೋರ್ಟ್...

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಇಂಧನ ಮತ್ತು ಸಂಪನ್ಮೂಲ ಸಂಸ್ಥೆಯ (ತೇರಿ) ನಿರ್ದೇಶಕ ಆರ್‌.ಕೆ. ಪಚೌರಿ ಅವರಿಗೆ ದೆಹಲಿ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ವಿದೇಶ ಪ್ರಯಾಣಕ್ಕೆ ಅನುಮತಿ ಸಹ ನೀಡಿದೆ.
ಪ್ರಕರಣ ಸಂಬಂಧ ಇಂದು ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಶಿವಾನಿ ಚೌಹಾಣ್ ಅವರ ಮುಂದೆ ವಿಚಾರಣಗೆ ಹಾಜರಾದ ಪಚೌರಿ ಅವರಿಗೆ ಮ್ಯಾಕ್ಸಿಕೊ ಸಮ್ಮೇಳನದಲ್ಲಿ ಭಾಗವಹಿಸಲು ಅನುಮತಿ ನೀಡಿದ್ದಾರೆ.
ಪ್ರಕರಣದ ತನಿಖೆ ಈಗಾಗಲೇ ಅಂತ್ಯವಾಗಿದೆ ಮತ್ತು ಚಾರ್ಜ್ ಶೀಟ್ ಸಹ ದಾಖಲಿಸಲಾಗಿದೆ. ಅಲ್ಲದೆ ತನಿಖೆಯ ವೇಳೆ ಆರೋಪಿಯನ್ನು ಬಂಧಿಸಿಲ್ಲ. ಹೀಗಾಗಿ ಅವರ ಬಂಧನ ಅಗತ್ಯ ಇಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಪಚೌರಿ ವಕೀಲ ಆಶಿಶ್ ದಿಕ್ಷಿತ್ ಅವರು ಜಾಮೀನು ಹಾಗೂ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಶಿವಾನಿ ಚೌಹಾಣ್ ಅವರು, 50 ಸಾವಿರ ರುಪಾಯಿ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಸ್ಯೂರಿಟಿ ಮೇಲೆ ಆರೋಪಿಗೆ ಜಾಮೀನು ನೀಡಿದ್ದಾರೆ.
ಟೆರಿಯ ಸದಸ್ಯನಾಗಿ ನನ್ನ ಅವಧಿ 2016ರ ಮಾರ್ಚ್ 31ಕ್ಕೆ ಕೊನೆಗೊಂಡಿದೆ. ಸಂಸ್ಥೆಯಿಂದ ಹೊರಬಂದ್ದು, ಇತರ ಆಸಕ್ತಿಗಳಲ್ಲಿ ಕ್ರಿಯಾಶೀಲನಾಗುತ್ತೇನೆ ಎಂದು ಪಚೌರಿ ಹೇಳಿದ್ದಾರೆ. 
ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಚೌರಿ ವಿರುದ್ಧ ಈವರೆಗೆ ಮೂವರು ಮಹಿಳೆಯರು ದೂರು ದಾಖಲಿಸಿದ್ದಾರೆ. ನಿರೀಕ್ಷಣಾ ಜಾಮೀನಿನಲ್ಲಿರುವ ಆರ್.ಕೆ.ಪಚೌರಿ, ಲೈಂಗಿಕ ಕಿರುಕುಳ ಕೇಸಿಗೆ ಸಂಬಂಧಪಟ್ಟಂತೆ ಎರಡು ಬಾರಿ ವಿಚಾರಣೆಗೆ ಒಳಗಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ