ಶಿವಸೇನೆ ಮುಖ್ಯಸ್ಥೆ ಮನಿಷಾ ಕಯಾಂಡೆ 
ದೇಶ

ಮುಸ್ಲಿಂ ಸಮುದಾಯದ ಬೆಂಬಲ ಕೋರಿದ ಜಾಕಿರ್ ನಾಯಕ್: ಸರ್ಕಾರಕ್ಕೆ ಶಿವಸೇನೆಯಿಂದ ಎಚ್ಚರಿಕೆ

ಉಗ್ರಗಾಮಿಗಳಿಗೆ ಸ್ಫೂರ್ತಿಯಾಗಿರುವ ಆರೋಪ ಎದುರಿಸುತ್ತಿರುವ ಜಾಕಿರ್ ನಾಯಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಸೇನೆ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದೆ.

ಮುಂಬೈ: ಉಗ್ರಗಾಮಿಗಳಿಗೆ ಸ್ಫೂರ್ತಿಯಾಗಿರುವ ಆರೋಪ ಎದುರಿಸುತ್ತಿರುವ ಜಾಕಿರ್ ನಾಯಕ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಆತನ ಸಾಮಾಜಿಕ ಜಾಲತಾಣಗಳ ಖಾತೆ, ವೆಬ್ ಸೈಟ್ ಗಳನ್ನು ನಿರ್ಬಂಧಿಸಬೇಕು ಎಂದು ಶಿವಸೇನೆ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದೆ.

ಜಾಕಿರ್ ನಾಯಕ್ ವಿರುದ್ಧ ಕೇಳಿಬಂದಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದು, ಕಾನೂನು ಸುವ್ಯಸ್ಥೆ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಸರ್ಕಾರ ಆತನ ಸಾಮಾಜಿಕ ಜಾಲತಾಣಗಳ ಖಾತೆ, ವೆಬ್ ಸೈಟ್ ಗಳನ್ನು ನಿರ್ಬಂಧಿಸಬೇಕು ಎಂದು ಶಿವಸೇನೆ ಆಗ್ರಹಿಸಿದೆ. ತಮ್ಮ ವಿರುದ್ಧ ಉಗ್ರಗಾವಾದಕ್ಕೆ ಪ್ರಚೋದನೆ ನೀಡುತ್ತಿರುವ ಆರೋಪ ಕೇಳಿಬಂದ ನಂತರ ಜಾಕಿರ್ ನಾಯಕ್ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಸಮುದಾಯದಿಂದ ಬೆಂಬಲ ಕೋರಿದ್ದಾರೆ. ಜಾಕಿರ್ ನಾಯಕ್ ನ ಸಾಮಾಜಿಕ ಜಾಲತಾಣಗಳ ಖಾತೆ, ವೆಬ್ ಸೈಟ್ ನ್ನು ನಿರ್ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳದೇ ಇದ್ದರೆ ಇದು ರಾಜ್ಯದ ಕಾನೂನು ಸುವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಶಿವಸೇನೆ ಮುಖ್ಯಸ್ಥೆ ಮನಿಷಾ ಕಯಾಂಡೆ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ತನಿಖೆ ಎದುರಿಸುತ್ತಿರುವ ಜಾಕಿರ್ ನಾಯಕ್ ತನ್ನ ಬೆಂಬಲಕ್ಕೆ ನಿಲ್ಲುವಂತೆ ಮುಸ್ಲಿಂ ಸಮುದಾಯಕ್ಕೆ ಟ್ವಿಟರ್ ಮೂಲಕ ಈಗಾಗಲೇ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT