ಸಾಂದರ್ಭಿಕ ಚಿತ್ರ 
ದೇಶ

ನಾಳೆಯಿಂದ ಎರಡು ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ

ಐಡಿಬಿಐ ಬ್ಯಾಂಕ್‌ ಖಾಸಗೀಕರಣ ಹಾಗೂ ಎಸ್ ಬಿಐ ವಿಲೀನ ವಿರೋಧಿಸಿ ಸರ್ಕಾರಿ ಬ್ಯಾಂಕ್ ನೌಕರರು ನಾಳೆ ಮತ್ತು ನಾಡಿದ್ದು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಂಡಿದ್ದಾರೆ.

ನವದೆಹಲಿ: ಐಡಿಬಿಐ ಬ್ಯಾಂಕ್‌ ಖಾಸಗೀಕರಣ ಹಾಗೂ ಎಸ್ ಬಿಐ ವಿಲೀನ ವಿರೋಧಿಸಿ ನಾಳೆ ಮತ್ತು ನಾಡಿದ್ದು ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ.

ಕೇಂದ್ರ ಕಾರ್ಮಿಕ ಇಲಾಖೆಯ ಮುಖ್ಯ ಆಯುಕ್ತರೊಂದಿಗೆ ನಡೆದ ಮಾತುಕತೆ ಮುರಿದು ಬಿದ್ಧ ನಂತರ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ.

ಜುಲೈ 12ರಂದು  ಮತ್ತು ಜುಲೈ 13 ರಂದು ಮುಷ್ಕರ ನಡೆಸಲು ತೀರ್ಮಾನ ನಡೆಸಿದ್ದು, ಬ್ಯಾಂಕ್ ವಹಿವಾಟು ಅಸ್ತವ್ಯಸ್ತಗೊಳ್ಳಲಿದೆ. ಜುಲೈ 12 ರಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು, ಸ್ಟೇಟ್‌ ಬ್ಯಾಂಕ್‌ ಆಫ್‌ ಜೈಪುರ ಸೇರಿದಂತೆ ಎಸ್‌ಬಿಐನ ಐದು ಸಹವರ್ತಿ ಬ್ಯಾಂಕ್‌ಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ.

ಜುಲೈ 13 ರಂದು ಅಖಿಲ ಭಾರತ ಬ್ಯಾಂಕ್‌ ಅಧಿಕಾರಿಗಳ ಸಂಘಟನೆ ಮತ್ತು ರಾಜ್ಯ ವಲಯದ ಉದ್ಯೋಗಿಗಳ ಸಂಘಟನೆಯೂ ಮುಷ್ಕರದಲ್ಲಿ ಭಾಗವಹಿಸಲಿವೆ. ಮುಷ್ಕರದಿಂದಾಗಿ ಈ ಎರಡೂ ದಿನಗಳು ಬ್ಯಾಂಕ್‌ ವ್ಯವಹಾರಕ್ಕೆ ತೊಡಕಾಗಲಿವೆ ಎಂದು ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಈಗಾಗಲೇ ಸೂಚನೆ ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT