ಜಾಕೀರ್ ನಾಯಕ್ 
ದೇಶ

ಯಾವುದೇ ರೀತಿಯ ಭಯೋತ್ಪಾದನೆಗೂ ನನ್ನ ಬೆಂಬಲ ಇಲ್ಲ: ಜಾಕೀರ್ ನಾಯಕ್

ವಿವಾದಾತ್ಮಕ ಭಾಷಣ ಮತ್ತು ಲೇಖನಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮುಸ್ಲಿಂ ಪ್ರವಚನಕಾರ ಜಾಕೀರ್ ನಾಯಕ್ ಅವರು, ತಾವು ಯಾವುದೇ ಹಿಂಸಾಚಾರ...

ನವದೆಹಲಿ: ವಿವಾದಾತ್ಮಕ ಭಾಷಣ ಮತ್ತು ಲೇಖನಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮುಸ್ಲಿಂ ಪ್ರವಚನಕಾರ ಜಾಕೀರ್ ನಾಯಕ್ ಅವರು, ತಾವು  ಯಾವುದೇ ಹಿಂಸಾಚಾರ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ನನ್ನ ಹೇಳಿಕೆಗಳನ್ನು ಯಾವುದೇ ರೀತಿಯ ಹಿಂಸೆಗೆ ಬಳಸುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಭಾರತ ಮತ್ತು ಬಾಂಗ್ಲಾದೇಶ ತನ್ನ ವಿರುದ್ಧ ತನಿಖೆಯ ಎಚ್ಚರಿಕೆ ನೀಡಿದ ಬೆನ್ನಲ್ಲೇ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಜಾಕೀರ್ ನಾಯಕ್,  ನನ್ನನ್ನು ಇದುವರೆಗೆ ಯಾವ ಅಧಿಕಾರಿಯೂ ಸಂರ್ಪಸಿಲ್ಲ. ಭಾರತದ ಯಾವುದೇ ತನಿಖಾ ಸಂಸ್ಥೆಯ, ಯಾರೇ ಅಧಿಕಾರಿಗೂ ನನ್ನಿಂದ ಏನೇ ಮಾಹಿತಿ ಬೇಕಾಗಿದ್ದರೂ ಒದಗಿಸಲು ನಾನು ಸಿದ್ಧ ಎಂದು ಹೇಳಿದ್ದಾರೆ.
ಕಾಲಾವಕಾಶ ಲಭಿಸಿದರೆ, ಕೆಲವೇ ದಿನಗಳಲ್ಲಿ ನನ್ನ ವಿರುದ್ಧ ಮಾಡಲಾಗಿರುವ ಪ್ರಮುಖ ಆರೋಪಗಳಿಗೆ ನಾನು ವಿಡಿಯೋ ಮೂಲಕವೇ ಉತ್ತರಗಳನ್ನು ನೀಡುತ್ತೇನೆ ಮತ್ತು ಅದನ್ನು ಮಾಧ್ಯಮಗಳಿಗೂ ನೀಡುತ್ತೇನೆ ಎಂದು ಹೇಳಿದ್ದಾರೆ.
2016ರ ಜುಲೈ 1ರಂದು ಬಾಂಗ್ಲಾದೇಶದ ಡಾಕಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳು ನನ್ನ ಬಗ್ಗೆ ನಡೆಸುತ್ತಿರುವ ವಿಚಾರಣೆ ನನಗೆ ಆಘಾತ ಉಂಟು ಮಾಡಿದೆ ಎಂದು ಅವರು ಜಾಕೀರ್ ನಾಯಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT