ದಕ್ಷಿಣ ಸುಡಾನ್ 
ದೇಶ

ಸುಡಾನ್'ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ: ಸುಷ್ಮಾ ಸ್ವರಾಜ್

ಯುದ್ಧ ಪೀಡತ ಪ್ರದೇಶ ದಕ್ಷಿಣ ಸುಡಾನ್'ನಲ್ಲಿರುವ ಭಾರತೀಯರ ರಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ಯುದ್ಧ ಪೀಡತ ಪ್ರದೇಶ ದಕ್ಷಿಣ ಸುಡಾನ್'ನಲ್ಲಿರುವ ಭಾರತೀಯರ ರಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಹೇಳಿದ್ದಾರೆ.

ದಕ್ಷಿಣ ಸುಡಾನ್ ನಲ್ಲಿ ಸರ್ಕಾರದ ಸೇನಾ ಪಡೆಗಳು ಮತ್ತು ಬಂಡುಕೋರರ ನಡುವಿನ ಘರ್ಷಣೆಯಿಂದಾಗಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಕುರಿತಂತೆ ಸುಷ್ಮಾ ಸ್ವರಾಜ್ ಅವರು ಅಧಿಕಾರಿಗಳೊಂದಿಗೆ ಇಂದು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ.

ಸಭೆಯಲ್ಲಿ ವಿ.ಕೆ. ಸಿಂಗ್, ಎಂ.ಜೆ. ಅಕ್ಬರ್ ಮತ್ತು ವಿದೇಶಾಂಗಾ ಕಾರ್ಯದರ್ಶಿ ಎಸ್. ಜೈಶಂಕರ್ ಅವರು ಭಾಗಿಯಾಗಿದ್ದರು. ದಕ್ಷಿಣ ಸುಡಾನ್ ನಲ್ಲಿರು ಸಿಲುಕಿರುವ ಭಾರತೀಯನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡಬೇಕು ಮತ್ತು ಸ್ಥಳಾಂತರದ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ.

ಸಭೆ ನಂತರ ಮಾತನಾಡಿರುವ ಸುಷ್ಮಾ ಸ್ವರಾಜ್ ಅವರು, ದಕ್ಷಿಣ ಸುಡಾನ್ ನಲ್ಲಿ ಸಿಲುಕಿರುವ ಭಾರತೀಯ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಹಿಂದಿದ್ದ ಪರಿಸ್ಥಿತಿಗಿಂತ ಇದೀಗ ಸುಡಾನ್ ನಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ.

ಭಾರತೀಯ ರಕ್ಷಣೆ ಸರ್ಕಾರಕ್ಕೆ ಅತೀ ಮುಖ್ಯವಾದದ್ದು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ, ಹಿಂತಿರುಗಿ ಬರಲು ಇಚ್ಛಿಸುತ್ತೀರಾ ಎಂದು ಭಾರತೀಯರನ್ನು ಕೇಳಲಾಗುತ್ತಿದೆ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ದಕ್ಷಿಣ ಸುಡಾನ್ ನಲ್ಲಿ 600ಕ್ಕೂ ಹೆಚ್ಚು ಭಾರತೀಯರಿದ್ದು, ಸುಡಾನ್ ರಾಜಧಾನಿ ಜುಬಾದಲ್ಲಿ 450 ಭಾರತೀಯರಿದ್ದಾರೆ. ಜುಬಾ ಹೊರವಲಯದಲ್ಲೇ ಹಿಂಸಾಚಾರ ನಡೆಯುತ್ತಿದ್ದು, ಹೊರವಲಯದಲ್ಲೂ 150ಕ್ಕೂ ಹೆಚ್ಚು ಭಾರತೀಯರಿದ್ದಾರೆಂದು ತಿಳಿದುಬಂದಿದೆ.

ದಕ್ಷಿಣ ಸುಡಾನ್ ನಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿ ಕುರಿತಂತೆ ನಿನ್ನೆಯಷ್ಟೇ ವಿದೇಶಾಂಗ ಸಚಿವಾಲಯದ ಸಲಹೆಗಾರರು ಪ್ರತಿಕ್ರಿಯೆ ನೀಡಿದ್ದರು. ದಕ್ಷಿಣ ಸುಡಾನ್ ನಿಂದ ಭಾರತಕ್ಕೆ ಬರಲು ಇಚ್ಛಿಸುವ ಭಾರತೀಯರು controlroomjuba@gmail.comಗೆ ಮಾಹಿತಿ ನೀಡುವ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು. ಭಾರತೀಯರು ಸ್ವಯಂಪ್ರೇರಿತರಾಗಿ ವೈಯಕ್ತಿಕ ವಿವರಗಳನ್ನು ಭಾರತೀಯ ರಾಯಭಾರಿ ಕಚೇರಿಗೆ ನೀಡಬೇಕು. ಭಾರತೀಯರಿಗೆ ಸರ್ಕಾರ ವ್ಯವಸ್ಥೆ ಕಲ್ಪಿಸಿದ್ದು, ನೆರವು ನೀಡಲು ಮುಂದಾಗಿದೆ. ಹೀಗಾಗಿ ನೆರವು ಇಚ್ಛಿಸುವ ಭಾರತೀಯರು +211955589611, +211925502025, +211956942720, +211955318587 ಸಂಪರ್ಕಿಸುವಂತೆ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT