ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ 
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ

ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್...

ನವದೆಹಲಿ: ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನಿರಾಳ ಲಭಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಮತ್ತು ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಇತರೆ ಸಂಸ್ಥೆ, ಕಾಂಗ್ರೆಸ್ ಪಕ್ಷದ  2010-11ನೇ ಸಾಲಿನ ದಾಖಲೆಗಳನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು.

ಈ ಆದೇಶದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದರಂತೆ ಮೇಲ್ಮನವಿಯನ್ನು ಇಂದು ವಿಚಾರಣೆ ನಡೆಸಿರುವ ದೆಹಲಿ ಹೈ ಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ತೇಜಿಯವರು ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ್ದು, ಏಪ್ರಿಲ್ 18 ರವರೆಗೂ ತೀರ್ಪು ಕಾಯ್ದಿರಿಸಿದ್ದಾರೆ. ಹೈಕೋರ್ಟ್ ನ ಈ ಆದೇಶದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ನಿರಾಳ ಸಿಕ್ಕಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT