ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾ ಬಂಧನ

ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾನನ್ನು ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ...

ನವದೆಹಲಿ: ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾನನ್ನು ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು  ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಈ ಕುರಿತಂತೆ ತೆಲಂಗಾಣ ಗುಪ್ತಚರ ದಳ ಮಾಹಿತಿ ನೀಡಿದ್ದು, ಹೈದರಾಬಾದ್ ಇಸಿಸ್ ಮುಖ್ಯಸ್ಥನಾಗಿದ್ದ ಯಾಸಿರ್ ನಿಅಮಾತುಲ್ಲಾ ಮತ್ತು  ಉಗ್ರ ಸಂಘಟನೆಯಿಂದ ಪ್ರೇರಣೆಗೊಂಡು ವಿಧ್ವಂಸಕ ಕೃತ್ಯಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಅತಾಉಲ್ಲಾ ರೆಹ್ಮಾನ್ ಎಂಬುವವರನ್ನು ರಾಷ್ಟ್ರೀಯ ತನಿಖಾ ದಳ ಬಂಧನಕ್ಕೊಳಪಡಿಸಿದೆ ಎಂದು ಮಾಹಿತಿ ನೀಡಿದೆ. ಅಲ್ಲದೆ, ಶೀಘ್ರದಲ್ಲೇ ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸುವುದಾಗಿ ಹೇಳಿದೆ.

ಇತ್ತೀಚೆಗಷ್ಟೇ ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಐವರು ಶಂಕಿತರನ್ನು ಎನ್ಐಎ ಅಧಿಕಾರಿಗಳು ಹೈದರಾಬಾದ್ ನಲ್ಲಿ ಬಂಧನಕ್ಕೊಳಪಡಿಸಿದ್ದರು. ಇದರಂತೆ ಉಗ್ರರ ಪಿತೂರಿ ಹಾಗೂ ಯೋಜನೆಗಳನ್ನು ಬೆನ್ನಟ್ಟಿದ್ದ ಎನ್ಐಎ ಅಧಿಕಾರಿಗಳು ಇಂದು ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾ ಹಾಗೂ ಅತಾಉಲ್ಲಾ ರೆಹ್ಮಾನ್ ರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

SCROLL FOR NEXT