ಕಾಶ್ಮೀರ ಗಲಭೆ (ಸಂಗ್ರಹ ಚಿತ್ರ) 
ದೇಶ

ಕಾಶ್ಮೀರ ಗಲಭೆ: ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಐಕ್ಯತೆ ಪ್ರದರ್ಶಿಸಿದ ಕೇಂದ್ರ ಸರ್ಕಾರ

ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿನ ಸಂಖ್ಯೆ ಬರೊಬ್ಬರಿ 32ಕ್ಕೇರಿದೆ...

ನವದೆಹಲಿ: ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿನ ಸಂಖ್ಯೆ ಬರೊಬ್ಬರಿ 32ಕ್ಕೇರಿದೆ.

ಈ ನಡುವೆ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಅಪರೂಪ ಎಂಬಂತೆ ಐಕ್ಯತೆ ಪ್ರದರ್ಶನ ಮಾಡಿದ್ದು, ನಿನ್ನೆ ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್ ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಪಾಲ್ಗೊಂಡಿದ್ದರು. ಸಭೆ ಬಳಿಕ ಮಾತನಾಡಿದ ಸೋನಿಯಾಗಾಂಧಿ ಅವರು,  ರಾಷ್ಟ್ರೀಯ ಭದ್ರತಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೇ ಸೂಕ್ತ ಕ್ರಮಕೈಗೊಳ್ಳಿ ಎಂದು ಹೇಳಿದರೆ, ಇತ್ತ ಕಾಶ್ಮೀರ ಮಾಜಿ ಸಿಎಂ ಒಮರ್ ಆಬ್ದುಲ್ಲಾ ಅವರು  ಮಾತನಾಡಿ, ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಇನ್ನು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಅವರಿಗೆ ನಾವು  ಎಲ್ಲ ರೀತಿಯ ನೆರವು ನೀಡುವುದಾಗಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ಇನ್ನು ಕೀನ್ಯಾ ಪ್ರವಾಸದಲ್ಲಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ಧೋವಲ್ ಅವರು ಕಾಶ್ಮೀರ ಗಲಭೆ ವಿಚಾರ ತಿಳಿಯುತ್ತಿದ್ದಂತೆಯೇ ಭಾರತಕ್ಕೆ ವಾಪಸಾಗಿದ್ದು, ಅಧಿಕಾರಿಗಳೊಂದಿಗೆ  ಚರ್ಚೆ ನಡೆಸಲಿದ್ದಾರೆ.

32ಕ್ಕೇರಿದ ಸಾವಿನ ಸಂಖ್ಯೆ

ಈ ನಡುವೆ ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೇರಿದ್ದು, ನಿನ್ನೆ ಒಂದೇ ದಿನ ಓರ್ವ ಬಾಲಕಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ  100ಕ್ಕೂ ಹೆಚ್ಚು ಪೊಲೀಸರು ಸೇರಿದಂತೆ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಪ್ರತಿಭಟನೆ ಇಂದೂ  ಮುಂದುವರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಿಯೋಜನೆ ಮುಂದುವರೆದಿದ್ದು, ಈ ವರೆಗೂ 800ಕ್ಕೂ ಹೆಚ್ಚು ಅರೆಸೇನಾ ತುಕಡಿಗಳು,  ಅಶ್ರುವಾಯುದಳ, ತುರ್ತು ಪ್ರಹಾರದಳಗಳು ಕಾರ್ಯನಿರ್ವಹಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT