ಸಾಂದರ್ಭಿಕ ಚಿತ್ರ 
ದೇಶ

10 ಲಕ್ಷ ಬ್ಯಾಂಕ್ ನೌಕರರಿಂದ ಜು.29ರಂದು ಮುಷ್ಕರ

ಬ್ಯಾಂಕಿಂಗ್ ಉದ್ಯಮಕ್ಕೆ ಸಂಬಂಧಿಸಿದ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಜುಲೈ 29ರಂದು ಮುಷ್ಕರ....

ಚೆನ್ನೈ: ಬ್ಯಾಂಕಿಂಗ್ ಉದ್ಯಮಕ್ಕೆ ಸಂಬಂಧಿಸಿದ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಜುಲೈ 29ರಂದು ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ(ಎಐಬಿಇಎ) ಪ್ರಮುಖ ನಾಯಕರೊಬ್ಬರು ಹೇಳಿದ್ದಾರೆ.
ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳ ಸದಸ್ಯತ್ವವನ್ನು ಹೊಂದಿರುವ ಬ್ಯಾಂಕ್ ಒಕ್ಕೂಟಗಳ ವೇದಿಕೆ ಮುಷ್ಕರಕ್ಕೆ ಕರೆ ನೀಡಿದ್ದು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸಿ ಬ್ಯಾಂಕ್ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ ಎಂದು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ಅವರು ಹೇಳಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು, ಹಳೆಯ ಖಾಸಗಿ ಬ್ಯಾಂಕ್ ಗಳ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ವಿದೇಶಗಳ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್ ಗಳ ನೌಕರರು ಈ ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ವೆಂಕಟಾಚಲಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್ ಒಕ್ಕೂಟಗಳ ವೇದಿಕೆ ಈ ಸಂಬಂಧ ಈಗಾಗಲೇ ಎಲ್ಲಾ ಭಾರತೀಯ ಬ್ಯಾಂಕ್ ಒಕ್ಕೂಟಗಳಿಗೆ ನೋಟಿಸ್ ನೀಡಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?