ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಸುಡಾನ್ ನಲ್ಲಿರುವ ಭಾರತೀಯರ ರಕ್ಷಣೆಗೆ 'ಸಂಕಟ ಮೋಚನ್' ಕಾರ್ಯಾಚರಣೆಗೆ ಕೇಂದ್ರ ಸಿದ್ಧತೆ

ಯುದ್ಧ ಪೀಡಿತ ಪ್ರದೇಶ ದಕ್ಷಿಣ ಸುಡಾನ್'ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ 'ಸಂಕಟ್ ಮೋಚನ್' ಕಾರ್ಯಾಚರಣೆ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು...

ನವದೆಹಲಿ: ಯುದ್ಧ ಪೀಡಿತ ಪ್ರದೇಶ ದಕ್ಷಿಣ ಸುಡಾನ್'ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ 'ಸಂಕಟ್ ಮೋಚನ್' ಕಾರ್ಯಾಚರಣೆ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಸುಡಾನ್ ನಲ್ಲಿ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಭಾರತೀಯ ರಕ್ಷಣೆಗೆ 'ಸಂಕಟ್ ಮೋಚನ್' ಕಾರ್ಯಾಚರಣೆಯನ್ನು ಗುರುವಾರ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದ್ದು, ವಿದೇಶಾಂಗ ರಾಜ್ಯ ಸಚಿವ ವಿ.ಕೆ.ಸಿಂಗ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ದಕ್ಷಿಣ ಸುಡಾನ್ ನಲ್ಲಿ ಸಿಲುಕಿರುವ ಭಾರತೀಯ ರಕ್ಷಣೆಗಾಗಿ 'ಸಂಕಟ್ ಮೋಚನ್' ನ್ನು ಬಿಡುಗಡೆ ಮಾಡುತ್ತಿದ್ದೇವೆ. ನನ್ನ ಸಹೋದ್ಯೋಗಿ ವಿಕೆ. ಸಿಂಗ್ ಅವರು ಕಾರ್ಯಾಚರಣೆಯ ನೇತೃತ್ವವನ್ನು ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ವಿಕೆ. ಸಿಂಗ್ ಅವರಿಗೆ ಕಾರ್ಯದರ್ಶಿ ಅಮರ್ ಸಿನ್ಹಾ, ಜೆಎಸ್. ಸತ್ಬೀರ್ ಸಿಂಗ್ ಮತ್ತು ನಿರ್ದೇಶಕ ಅಂಜಾನಿ ಕುಮಾರ್ ಅವರು ಸಾಥ್ ನೀಡಲಿದ್ದಾರೆ. ದಕ್ಷಿಣ ಸುಡಾನ್ ನಲ್ಲಿರುವ ಭಾರತೀಯ ರಾಯಭಾರಿ ಶ್ರೀಕುಮಾರ್ ಮೆನನ್ ಮತ್ತು ಅವರ ತಂಡ ಕೂಡ ಕಾರ್ಯಾಚರಣೆಗೆ ಕೈಜೋಡಿಸಲಿದೆ ಎಂದು ಸರಣಿ ಟ್ವೀಟ್ ನಲ್ಲಿ ಸುಷ್ಮಾ ಅವರು ಹೇಳಿಕೊಂಡಿದ್ದಾರೆ.  

ಅಲ್ಲದೆ, ಕಾರ್ಯಾಚರಣೆಗೆ ಬೆಂಬಲ ನೀಡುತ್ತಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಧನ್ಯವಾದ ಹೇಳಿರುವ ಅವರು, ಕಾರ್ಯಾಚರಣೆಯಲ್ಲಿ ತೊಡಗಿಕೊಳ್ಳುವ ಭಾರತೀಯ ಸೇನಾ ಪಡೆಗೆ ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT