ಕಾಶ್ಮೀರ ಗಲಭೆ 
ದೇಶ

ಕಾಶ್ಮೀರದ ಅನಂತ್ ನಾಗ್ ನಲ್ಲಿ ಮತ್ತೊಂದು ಗಲಭೆ: ಮತ್ತೆ ಅಮರನಾಥ್ ಯಾತ್ರೆ ಸ್ಥಗಿತ

ಕಾಶ್ಮೀರದಲ್ಲಿ ಉಗ್ರ ಬುರ್ಹಾನ್ ಮುಜಾಫರ್ ವಾನಿ ಹತ್ಯೆಯಿಂದಾಗಿ ಉಂಟಾದ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದ್ದು, ಅಮರನಾಥ್ ಯಾತ್ರೆ ಮತ್ತೊಮ್ಮೆ ಸ್ಥಗಿತಗೊಂಡಿದೆ.

ಜಮ್ಮು: ಕಾಶ್ಮೀರದಲ್ಲಿ ಉಗ್ರ ಬುರ್ಹಾನ್ ಮುಜಾಫರ್ ವಾನಿ ಹತ್ಯೆಯಿಂದಾಗಿ ಉಂಟಾದ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದ್ದು, ಅಮರನಾಥ್ ಯಾತ್ರೆ ಮತ್ತೊಮ್ಮೆ ಸ್ಥಗಿತಗೊಂಡಿದೆ.

ಮುಂದುವರೆದಿರುವ ಪ್ರಕ್ಷುಬ್ಧ ವಾತಾವರಣದೊಂದಿಗೆ ಅನಂತ್ ನಾಗ್ ಜಿಲ್ಲೆಯಲ್ಲಿ ಹೊಸದೊಂದು ಗಲಭೆ ನಡೆದಿರುವ ಬಗ್ಗೆ ವರದಿಯಾಗಿದ್ದು, ಎರಡನೇ ಬಾರಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.  

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಉಗ್ರ ಬುರ್ಹಾನ್ ಮುಜಾಫರ್ ವಾನಿಯ ಹತ್ಯೆಯಾದ ನಂತರ ಉಂಟಾದ ಗಲಭೆಗಳಿಂದಾಗಿ. ಮೂರು ದಿನಗಳ ಕಾಲ ಅಮರನಾಥ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಆ ನಂತರ ಸೋಮವಾರದಂದು ಯಾತ್ರೆಯನ್ನು ಪುನಾರಂಭ ಮಾಡಿರುವುದನ್ನು ಸ್ಥಳೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದರು. ಇತ್ತೀಚಿನ ವರದಿಯ ಪ್ರಕಾರ ಅಮರನಾಥ್ ಯಾತ್ರೆ ನಡೆಯುವ ಅನಂತ್ ನಾಗ್ ಜಿಲ್ಲೆಯಲ್ಲಿ ಹೊಸ ಗಲಭೆ ನಡೆದಿರುವುದರ ಬಗ್ಗೆ ಮಾಹಿತಿ ದೊರೆತಿದ್ದು ತಾತ್ಕಾಲಿಕವಾಗಿ ಅಮರಾನಾಥ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಪ್ರತಿಭಟನಾ ನಿರತರು ಹಾಗೂ ಪೊಲೀಸರ ನಡುವಿನ ಘರ್ಷಣೆಯಿಂದಾಗಿ ಕಾಶ್ಮೀರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 30 ನ್ನು ದಾಟಿದ್ದು, ಕರ್ಫ್ಯೂ ಮುಂದುವರೆದಿದ್ದು, ಇನ್ನು ಎರಡು ದಿನಗಳ ಕಾಲ ಪ್ರತಿಭಟನೆ ನಡೆಸಲು ಕಾಶ್ಮೀರ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT