ಅತ್ಯಾಚಾರ 
ದೇಶ

ಕಷ್ಟ ನಿವಾರಣೆಗೆ ವಿಶೇಷ ಪೂಜೆ; ಮಹಿಳೆಯನ್ನು ಕೋಣೆಗೆ ಕರೆಸಿ ಅತ್ಯಾಚಾರ: ಪೂಜಾರಿ ಬಂಧನ

ಕಷ್ಟಗಳ ನಿವಾರಣೆಗಾಗಿ ವಿಶೇಷ ಪೂಜೆ ಮಾಡುವುದಾಗಿ ಮಹಿಳೆಯೊಬ್ಬರನ್ನು ದೇವಸ್ಥಾನದ ಪಕ್ಕದಲ್ಲಿದ್ದ ಕೋಣೆಯೊಳಗೆ ಕರೆಸಿಕೊಂಡು ಆಕೆಯ...

ಹೈದರಾಬಾದ್: ಕಷ್ಟಗಳ ನಿವಾರಣೆಗಾಗಿ ವಿಶೇಷ ಪೂಜೆ ಮಾಡುವುದಾಗಿ ಮಹಿಳೆಯೊಬ್ಬರನ್ನು ದೇವಸ್ಥಾನದ ಪಕ್ಕದಲ್ಲಿದ್ದ ಕೋಣೆಯೊಳಗೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪೂಜಾರಿಯೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್ ನ ವಿಠಲ್ವಾಡಿ ಗ್ರಾಮದಲ್ಲಿರುವ ದೇವಸ್ಥಾನದ ಪೂಜಾರಿ 26 ವರ್ಷದ ಕೆ ರಾಮಾರಾವ್ ಅಲಿಯಾಸ್ ರಾಮು ಬುಧವಾರ ದೇವಸ್ಥಾನದ ಮುಂಬಾಗ 45 ವರ್ಷದ ಮಹಿಳೆ ಅಳುತ್ತಿರುವುದನ್ನು ಗಮನಿಸಿದ್ದಾನೆ. ಈ ವೇಳೆ ಮಹಿಳೆಗೆ ತಮಗಿರುವ ಕಷ್ಟಕಾರ್ಪಣ್ಯ ನಿವಾರಣೆಗೆ ವಿಶೇಷ ಪೂಜೆ ಮಾಡುತ್ತೇನೆ. ಅದಕ್ಕಾಗಿ ಅರಿಶಿಣ ಹಾಗೂ ಐದು ನಿಂಬೆಹಣ್ಣು ತರುವಂತೆ ಹೇಳಿದ್ದಾನೆ. ಅದರಂತೆ ಪದಾರ್ಥಗಳನ್ನು ತೆಗೆದುಕೊಂಡು ಮಹಿಳೆ ಕೋಣೆಗೆ ಹೋಗಿದ್ದಾಳೆ ಈ ವೇಳೆ ಪೂಜಾರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಅತ್ಯಾಚಾರ ಬಳಿಕ ಮಹಿಳೆ ನಾರಾಯಣ್ ಗುಡ ಪೊಲೀಸ್ ಠಾಣೆಗೆ ದೂರು ನೀಡಿದ್ದು ದೂರಿನನ್ವಯ ಪೂಜಾರಿಯನ್ನು ಬಂಧಿಸಲಾಗಿದೆ ಎಂದು ಇನ್ ಸ್ಪೆಕ್ಟರ್ ಭೀಮಾ ರೆಡ್ಡಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಸಂತ್ರಸ್ತೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT