ಅತ್ಯಾಚಾರ 
ದೇಶ

ಕಷ್ಟ ನಿವಾರಣೆಗೆ ವಿಶೇಷ ಪೂಜೆ; ಮಹಿಳೆಯನ್ನು ಕೋಣೆಗೆ ಕರೆಸಿ ಅತ್ಯಾಚಾರ: ಪೂಜಾರಿ ಬಂಧನ

ಕಷ್ಟಗಳ ನಿವಾರಣೆಗಾಗಿ ವಿಶೇಷ ಪೂಜೆ ಮಾಡುವುದಾಗಿ ಮಹಿಳೆಯೊಬ್ಬರನ್ನು ದೇವಸ್ಥಾನದ ಪಕ್ಕದಲ್ಲಿದ್ದ ಕೋಣೆಯೊಳಗೆ ಕರೆಸಿಕೊಂಡು ಆಕೆಯ...

ಹೈದರಾಬಾದ್: ಕಷ್ಟಗಳ ನಿವಾರಣೆಗಾಗಿ ವಿಶೇಷ ಪೂಜೆ ಮಾಡುವುದಾಗಿ ಮಹಿಳೆಯೊಬ್ಬರನ್ನು ದೇವಸ್ಥಾನದ ಪಕ್ಕದಲ್ಲಿದ್ದ ಕೋಣೆಯೊಳಗೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪೂಜಾರಿಯೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್ ನ ವಿಠಲ್ವಾಡಿ ಗ್ರಾಮದಲ್ಲಿರುವ ದೇವಸ್ಥಾನದ ಪೂಜಾರಿ 26 ವರ್ಷದ ಕೆ ರಾಮಾರಾವ್ ಅಲಿಯಾಸ್ ರಾಮು ಬುಧವಾರ ದೇವಸ್ಥಾನದ ಮುಂಬಾಗ 45 ವರ್ಷದ ಮಹಿಳೆ ಅಳುತ್ತಿರುವುದನ್ನು ಗಮನಿಸಿದ್ದಾನೆ. ಈ ವೇಳೆ ಮಹಿಳೆಗೆ ತಮಗಿರುವ ಕಷ್ಟಕಾರ್ಪಣ್ಯ ನಿವಾರಣೆಗೆ ವಿಶೇಷ ಪೂಜೆ ಮಾಡುತ್ತೇನೆ. ಅದಕ್ಕಾಗಿ ಅರಿಶಿಣ ಹಾಗೂ ಐದು ನಿಂಬೆಹಣ್ಣು ತರುವಂತೆ ಹೇಳಿದ್ದಾನೆ. ಅದರಂತೆ ಪದಾರ್ಥಗಳನ್ನು ತೆಗೆದುಕೊಂಡು ಮಹಿಳೆ ಕೋಣೆಗೆ ಹೋಗಿದ್ದಾಳೆ ಈ ವೇಳೆ ಪೂಜಾರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಅತ್ಯಾಚಾರ ಬಳಿಕ ಮಹಿಳೆ ನಾರಾಯಣ್ ಗುಡ ಪೊಲೀಸ್ ಠಾಣೆಗೆ ದೂರು ನೀಡಿದ್ದು ದೂರಿನನ್ವಯ ಪೂಜಾರಿಯನ್ನು ಬಂಧಿಸಲಾಗಿದೆ ಎಂದು ಇನ್ ಸ್ಪೆಕ್ಟರ್ ಭೀಮಾ ರೆಡ್ಡಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಸಂತ್ರಸ್ತೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಪುಟ ರಚನೆ ಕಸರತ್ತು: ನಿಯೋಜಿತ ಸಿಎಂ ಡಿಕೆ ಶಿವಕುಮಾರ್, ಹಂಗಾಮಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

Congress ಸರ್ಕಾರವಿದ್ದರೂ ಹಿಮಾಚಲ ಪ್ರದೇಶದಲ್ಲಿ 3 ಪುರಸಭೆ ಗೆದ್ದ BJP, ಒಂದಕ್ಕೆ ಕಾಂಗ್ರೆಸ್ ತೃಪ್ತಿ!

ಐಶ್ವರ್ಯಾ ರೈ ಕೇನ್ಸ್ ಲುಕ್‌ಗೆ ಬಾಡಿ ಶೇಮಿಂಗ್: ಕಂಗನಾ ನಂತರ ಟ್ರೋಲರ್ಸ್ ವಿರುದ್ಧ ಮಾಧುರಿ ದೀಕ್ಷಿತ್ ಗರಂ!

ಡಿಕೆಶಿ ಪ್ರಮಾಣ ವಚನ ದಿನವೇ ಹೊಸ ಕಾಂಗ್ರೆಸ್ ಭವನಕ್ಕೆ ರಾಹುಲ್ ಗಾಂಧಿ ಶಂಕು ಸ್ಥಾಪನೆ; ಸ್ಥಳ ಪರಿಶೀಲಿಸಿದ ನಿಯೋಜಿತ ಸಿಎಂ

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd

SCROLL FOR NEXT